ಸಜೀಪಮೂಡ ಪ ಪೂ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ – ಪ್ರತಿಭಾ ಪುರಸ್ಕಾರ….

ಬಂಟ್ವಾಳ: ಸಜೀಪಮೂಡ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ ಇವುಗಳ ಜಂಟಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಸಮಾರಂಭದಲ್ಲಿ ದ ಕ ಜಿ ಪ ಮಾಜಿ ಅಧ್ಯಕ್ಷ ಸದಾನಂದ ಪೂಂಜಾ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಎಸ್, ತಾಲೂಕು ಪಂಚಾಯಿತಿ ಸದಸ್ಯ ಸಂಜೀವ ಪೂಜಾರಿ ಕೆ , ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಶ್ವನಾಥ ಬೆಲ್ಚಡ, ಕೋಡೂರು ಪ್ರೌಢ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಯಪ್ರಕಾಶ್, ಸದಸ್ಯರುಗಳಾದ ಎಂ ಸುಬ್ರಹ್ಮಣ್ಯ ಭಟ್, ಕೆ ಸುರೇಶ್ ಶೆಟ್ಟಿ, ಮಹಾಬಲ ರೈ ಬರ್ಕೆ, ನವೀನ್, ಗ್ರಾಮ ಪಂಚಾಯತ್ ಸದಸ್ಯರಾದ ಸೀತಾರಾಮ, ಶ್ರೀನಾಥ್ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜು ಪ್ರಾಚಾರ್ಯ ಜಯರಾಮ ಶೆಟ್ಟಿ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ವರದಿ ವಾಚಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಕಾರ್ಯದರ್ಶಿ ವಾಸುದೇವ ಬೆಳ್ಳೆ ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಶ್ರೀನಿವಾಸ್ ವಂದನಾರ್ಪಣೆಗೈದರು ವಿದ್ಯಾರ್ಥಿಗಳಿಂದ ಯಕ್ಷಗಾನ, ಜಾನಪದ ನೃತ್ಯ, ವಿವಿಧ ವಿನೋದಾವಳಿ ಏರ್ಪಡಿಸಲಾಗಿತ್ತು.

Sponsors

Related Articles

Leave a Reply

Your email address will not be published. Required fields are marked *

Back to top button