ಸಜೀಪ ಮೂಡ ಕಾಲೇಜಿನ ನೂತನ ಕಟ್ಟಡದ ಶಿಲಾನ್ಯಾಸ…..

ಬಂಟ್ವಾಳ: ನಬಾರ್ಡ್ ಯೋಜನೆಯಡಿ 94 ಲಕ್ಷ ಅನುದಾನದಲ್ಲಿ ಸಜೀಪ ಮೂಡ ಸರಕಾರಿ ಪದವಿ ಪೂರ್ವ ‌ಕಾಲೇಜಿನ ನೂತನ ಕಟ್ಟಡದ ಶಿಲಾನ್ಯಾಸವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ಊರಿನ‌ ಜನರ ಸಹಕಾರದ ಜೊತೆ ಕಾಲೇಜಿನ ಬೇಡಿಕೆಗೆ ಅನುಗುಣವಾಗಿ ಕೆಲಸ ಕಾರ್ಯಗಳನ್ನು ನಡೆಸಲಾಗುವುದು.ಸರಕಾರದ ಅನುದಾನದ ಜೊತೆಯಲ್ಲಿ ದಾನಿಗಳ ಸಹಕಾರ ಇದ್ದರೆ ಗ್ರಾಮದ ಅಭಿವೃದ್ಧಿ ಸಾಧ್ಯ. ಪ್ರತಿಯೊಬ್ಬರು ಶಿಕ್ಷಿತರಾದಾಗ ಮಾತ್ರ ದೇಶ ಬಲಿಷ್ಟ ವಾಗಿ ಅಭಿವೃದ್ಧಿ ಪಥದಲ್ಲಿ ಸಾಗಲು ಅವಕಾಶ ಇದೆ ಹಾಗಾಗಿ ಸರಕಾರದ ಜೊತೆ ಸಂಘಸಂಸ್ಥೆಗಳು, ಗ್ರಾಮಸ್ಥರು ಸೇರಿ ಶಿಕ್ಷಣ ವ್ಯವಸ್ಥೆ ಗಳನ್ನು ಬಲಪಡಿಸುವ ಸಂಕಲ್ಪವನ್ನು ಮಾಡಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಬಿ.ಸದಾನಂದ ಪೂಂಜ, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಶ್ರೀಕಾಂತ ಶೆಟ್ಟಿ, ಪಾ.ಮ.ರೈ,ಸೇ.ಸಂಘದ ಅಧ್ಯಕ್ಷ ಜಯಶಂಕರ ಬಾಶ್ರಿತ್ತಾಯ,ಗುತ್ತಿಗೆದಾರ ಎಮ್.ಆರ್. ಕನ್ಟ್ರಕ್ಷನ್ ಮಾಲಿಕ ಎಮ್.ಆರ್ ಆಶ್ರಫ್, ಸಹಾಯಕ ಕಾರ್‍ಯನಿರ್ವಾಹಣಾಧಿಕಾರಿ ಲೋಕೋಪಯೋಗಿ ಇಲಾಖೆ ಷಣ್ಮುಗಂ, ಪ್ರಾಶುಂಪಾಲ ಕೆ, ವಸಂತ ಶೆಟ್ಟಿ, ಉಪಪ್ರಾಶುಂಪಾಲ ಜಯರಾಮ್ ಶೆಟ್ಟಿ, ಉಪನ್ಯಾಸಕರಾದ ಬಾಬು ಗಾಂವಕ್ಕರ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮಹಾಬಲ ರೈ, ಎಂ. ಸುಬ್ರಹ್ಮಣ್ಯ ಭಟ್, ಕೆ.ಸುರೇಶ್ ಶೆಟ್ಟಿ, ವಿಶ್ವನಾಥ ಕೊಟ್ಟಾರಿ, ಗ್ರಾ.ಪಂ. ಅಧ್ಯಕ್ಷ ಕೆ.ವಿಧ್ವನಾಥ ಬೆಳ್ಚಡ, ತಾ.ಪಂ. ಮಾಜಿ ಅಧ್ಯಕ್ಷ ಯಶವಂತ, ವಸಂತ ಶೆಟ್ಟಿ, ವೀರೆಂದ್ರ ಕುಲಾಲ್ ಉಪಸ್ಥಿತರಿದ್ದರು. ಭೂಮಿಪೂಜೆ ಧಾರ್ಮಿಕ ವಿಧಿವಿಧಾನವನ್ನು ಸುಬ್ರಹ್ಮಣ್ಯ ಭಟ್ ನೇರವೇರಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button