ಕೊಡಾಜೆಯಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ಉದ್ಘಾಟನೆ….

ಬಂಟ್ವಾಳ: ತಾಲೂಕಿನ ಮಾಣಿ ಅನಂತಾಡಿ ಸಮೀಪದ ಕೊಡಾಜೆ ಜಂಕ್ಷನ್ ಅಫ್ನಾನ್ ಕಾಂಪ್ಲೆಕ್ಸ್ ನಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಾರತ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯ ಕನಸಿನ ಕೂಸಾದ ಜನೌಷಧಿ ಕೇಂದ್ರ ಜನರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಜೌಷದ ಮತ್ತು ಸೇವೆಯನ್ನು ನೀಡುತ್ತಿದೆ ಎಂದು ಹೇಳಿದರು.
ಪುತ್ತೂರು ವಿವೇಕಾನಂದ ತಾಂತ್ರಿಕ ಮಹಾ ವಿದ್ಯಾಲಯದ ಗೋಪಿನಾಥ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಜನೌಷಧಿ ಕೇಂದ್ರದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದರು. ಮುಖ್ಯ ಅತಿಥಿಯಾಗಿ ತಾಂತ್ರಿಕ ಮಹಾವಿದ್ಯಾಲಯದ ಮಹಾದೇವ ಶಾಸ್ತ್ರಿ , ,ತಾ.ಪಂ. ಸದಸ್ಯೆ ಗೀತಾ, ರೈತಮೋರ್ಚ ತಾಲೂಕು ಅಧ್ಯಕ್ಷ ತನಿಯಪ್ಪ ಗೌಡ, ಶ್ರೀಧರ ರೈ ನೇರಳಕಟ್ಟೆ, ವೆಂಕಪ್ಪ ರೈ ಕುರ್ಲೆತ್ತಿಮಾರು, ರಾಮಣ್ಣ ಆಳ್ವ, ಡಾ. ಮನೋಹರ ರೈ ಅನಂತಾಡಿ, ಜಯಾನಂದ ಪೆರಾಜೆ ಶುಭ ಹಾರೈಸಿದರು.
ಸಂಸ್ಥೆಯ ಪಾಲುದಾರರಾದ ದಾಸಪ್ಪ ಶೆಟ್ಟಿ ಸ್ವಾಗತಿಸಿ, ಡಾ. ಕೃಷ್ಣ ಪ್ರಸಾದ್ ಶೆಟ್ಟಿ ಕೃತಜ್ಞತೆ ಸಲ್ಲಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button