ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ….

ಮಂಗಳೂರು: ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಸಹ್ಯಾದ್ರಿ ಕ್ಯಾಂಪಸ್‍ನಲ್ಲಿ ಡಿ.28 ರಂದು ಆಚರಿಸಲಾಯಿತು.
ಈ ಸಮ್ಮಿಲನ ಕಾರ್ಯಕ್ರಮದಲ್ಲಿ ಎಂಜಿನಿಯರಿಂಗ್ ಮತ್ತು ಎಂಬಿಎ ಸೇರಿದಂತೆ ವಿವಿಧ ಶಾಖೆಗಳಿಂದ ಸುಮಾರು 200ಕ್ಕೂ ಅಧಿಕ ಹಳೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಮತ್ತು ಸಂಭ್ರಮದಿಂದ ಪಾಲ್ಗೊಂಡರು . ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಂಗಳೂರಿನ ಕೆ ಎಸ್ಆರ್ ಟಿ ಸಿ ಡಿಪೋ ವ್ಯವಸ್ಥಾಪಕಿ ರಮ್ಯಾ ಕೆ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಹ್ಯಾದ್ರಿಯಲ್ಲಿ ಕೈಗೊಂಡ ಉಪಕ್ರಮಗಳನ್ನು ಶ್ಲಾಘಿಸಿದರು, ಇದು ವಿದ್ಯಾರ್ಥಿಗಳ ಒಟ್ಟಾರೆ ವ್ಯಕ್ತಿತ್ವ ಮತ್ತು ಜ್ಞಾನ ಸುಧಾರಣೆಗೆ ಸಹಾಯ ಮಾಡುತ್ತದೆ. ಈ ಉಪಕ್ರಮಗಳು, ಕರ್ನಾಟಕ ಸರ್ಕಾರದಿಂದ ಆಫೀಸರ್ ಗ್ರೇಡ್ ಉದ್ಯೋಗವನ್ನು ಪಡೆಯಲು ಹೇಗೆ ಸಹಾಯ ಮಾಡಿದೆ ಎಂದು ಅವರು ಉಲ್ಲೇಖಿಸಿದರು.
2012 ರ ಬ್ಯಾಚ್‍ನ ಹಳೆಯ ವಿದ್ಯಾರ್ಥಿಗಳಾದ ಸುಹಾನ್ ಶೆಟ್ಟಿ ಮತ್ತು 2019 ರ ಬ್ಯಾಚ್‍ನ ಚಿನ್ಮಯ್ ಸಹ್ಯಾದ್ರಿಯ ಉಪಕ್ರಮಗಳು ಮತ್ತು ಬೆಳವಣಿಗೆಯನ್ನು ಶ್ಲಾಘಿಸಿದರು.
ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಆರ್.ಶ್ರೀನಿವಾಸ ರಾವ್‍ ಕುಂಟೆ ಸ್ವಾಗತಿಸಿ, ಸಹ್ಯಾದ್ರಿ ಸಂಸ್ಥೆಯ ಬೆಳವಣಿಗೆಗಳು ಮತ್ತು ಸಾಧನೆಗಳನ್ನು ವಿವರಿಸಿದರು.
ಪ್ಲೇಸ್‍ಮೆಂಟ್‍ ವಿಭಾಗದ ಡೀನ್ ರಶ್ಮಿ ಭಂಡಾರಿ ಅವರು ವಂದನಾರ್ಪಣೆ ಮಾಡಿ, ವೃತ್ತಿಪರವಾಗಿ ಮತ್ತು ವೈಯಕ್ತಿಕವಾಗಿ ಜೀವನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ ಎಂದರಲ್ಲದೆ ಹಳೆಯ ವಿದ್ಯಾರ್ಥಿಗಳ ಬೆಳವಣಿಗೆಯು ಸಂಸ್ಥೆಯ ಬೆಳವಣಿಗೆಗೆ ನೇರವಾಗಿ ಪ್ರತಿಫಲಿಸುತ್ತದೆ ಎಂದರು.
ಉದ್ಘಾಟನಾ ಕಾರ್ಯಕ್ರಮದ ನಂತರ ಸಂಗೀತ ಸಂಜೆ, ರೋಚಕ ಆಟಗಳು, ಕ್ಯಾಂಪ್ ಫೈರ್ ಮತ್ತು ಹಳೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಹಳೆಯ ವಿದ್ಯಾರ್ಥಿ ಮನೀಶ್‍ ಕಾರ್ಯಕ್ರಮ ನಿರೂಪಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button