ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗಾಂಧಿ ಜಯಂತಿ ಮತ್ತು ಶಾಸ್ತ್ರಿ ಜಯಂತಿ ಆಚರಣೆ….

ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ಎನ್ಎಸ್ಎಸ್ ಘಟಕದ ಆಶ್ರಯದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ‘ಸ್ವಚ್ಛ ಸಹ್ಯಾದ್ರಿ’ ಕಾರ್ಯಕ್ರಮ ಸೆ.2 ರಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮವು ‘ರಘುಪತಿ ರಾಘವ ರಾಜರಾಮ್’ ಭಜನೆಯೊಂದಿಗೆ ಪ್ರಾರಂಭವಾಯಿತು. ಗಣ್ಯರು ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಹೂವುಗಳನ್ನು ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗದ ಪ್ರೊ. ಗುರುಸಿದ್ದಯ್ಯ ಹಿರೇಮಠ್ ಅವರು ಮಾತನಾಡಿ, ಗಾಂಧಿ ಅವರ ಬಾಲ್ಯದ ದಿನಗಳು ಮತ್ತು ಕೆಲವು ಸ್ಮರಣೀಯ ನಿದರ್ಶನಗಳನ್ನು ಹಂಚಿಕೊಂಡರು ಮತ್ತು ಗಾಂಧೀಜಿಯವರ ಉಲ್ಲೇಖದೊಂದಿಗೆ “ಎಲ್ಲಿ ಪ್ರೀತಿ ಇದೆಯೋ ಅಲ್ಲಿ ಜೀವನವಿದೆ”ಎಂದು ಹೇಳಿದರು. ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊ. ಡಾ. ಪ್ರೇಮಾನಂದ ಶೆಣೈ ಅವರು ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಜೀವನ ಕಥೆಯ ಕುರಿತು ತಮ್ಮ ಆಲೋಚನೆಗಳನ್ನು ಹಂಚಿಕೊಂಡು, ಅಹಿಂಸೆಯ ಶಕ್ತಿಯನ್ನು ವಿದ್ಯಾರ್ಥಿಗಳಿಗೆ ನೆನಪಿಸಿದರು.
ಪ್ರಾಂಶುಪಾಲ ಡಾ.ಆರ್.ಶ್ರೀನಿವಾಸ ರಾವ್ ಕುಂಟೆ ಮತ್ತು ಡೀನ್ ಪ್ರೊ. ರಮೇಶ್ ಕೆ ಜಿ ಇವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಸಿಸ್ಟಂಟ್ ಅಡ್ಮಿನಿಸ್ಟ್ರೇಷನ್ ಆಫೀಸರ್ ಶ್ರೀಲತಾ ಯು ಎ, ಎನ್ಎಸ್ಎಸ್ ಘಟಕದ ಪ್ರಯತ್ನಗಳನ್ನು ಶ್ಲಾಘಿಸುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು ಮತ್ತು ‘ಸ್ವಚ್ಛ ಸಹ್ಯಾದ್ರಿ’ ಕಾರ್ಯಕ್ರಮದಲ್ಲಿ ಭಾಗವಹಿದ ಎಲ್ಲಾ ವಿದ್ಯಾರ್ಥಿಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button