ಸುಬ್ರಮಣ್ಯದ ಬ್ರಹ್ಮ ರಥಕ್ಕೆ ಬಿ.ಸಿ.ರೋಡಿನಲ್ಲಿ ಸ್ವಾಗತ….

ಬಂಟ್ವಾಳ:ಕೋಟೇಶ್ವರದಿಂದ ಶ್ರೀ ಕ್ಷೇತ್ರ ಸುಬ್ರಮಣ್ಯಕ್ಕೆ ತೆರಳಲಿರುವ ನೂತನ ಬ್ರಹ್ಮ ರಥಕ್ಕೆ ಬಿ.ಸಿ.ರೋಡಿನಲ್ಲಿ ಭವ್ಯ ಸ್ವಾಗತ ನೀಡಲಾಗುವುದು ಎಂದು ಬಂಟ್ವಾಳ ತುಳು ಕೂಟ ಅಧ್ಯಕ್ಷ ಸುದರ್ಶನ್ ಜೈನ್ ತಿಳಿಸಿದ್ದಾರೆ.
ಅ.1 ಮಂಗಳವಾರ ಪೂ. ಗಂಟೆ 10 ಕ್ಕೆ ಬಿ.ಸಿ.ರೋಡಿನ ನೂತನ ಕೆ.ಎಸ್. ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಸ್ವಾಗತಿಸಿ ಬಳಿಕ ಸಾರ್ವಜನಿಕ ಮೆರವಣಿಗೆಯ ಮೂಲಕ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ರಥವನ್ನು ಬೀಳ್ಕೊಡಲಾಗುವುದು. ಈ ಪುಣ್ಯ ಕಾರ್ಯದಲ್ಲಿ ದೇವಸ್ಥಾನ , ಭಜನಾ ಮಂದಿರಳ ಭಕ್ತಾದಿಗಳು, ಹಾಗೂ ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಪಾಲ್ಗೊಳ್ಳಬೇಕಾಗಿ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ

Sponsors

Related Articles

Leave a Reply

Your email address will not be published. Required fields are marked *

Back to top button