ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಭೇಟಿ…
![img 20230125 wa0025](wp-content/uploads/2023/01/img-20230125-wa0025-780x470.jpg)
ಮಂಗಳೂರು: 5 ಜಿಲ್ಲೆ ಗಳ ರಾಜ್ಯ, ಜಿಲ್ಲಾ, ಬ್ಲಾಕ್ ಪದಾಧಿಕಾರಿಗಳನ್ನು ಭೇಟಿಯಾಗಲು ಮಂಗಳೂರಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಉಸ್ತುವಾರಿ, ರಾಜ್ಯಸಭಾ ಸದಸ್ಯರು ರಣದೀಪ್ ಸಿಂಗ್ ಸುರ್ಜೇವಾಲ ಇವರನ್ನು ಸುಳ್ಯ ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ವಿರೋಧಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ವಿಧಾನಸಭೆ ವಿಪಕ್ಷ ಉಪನಾಯಕ ಯು ಟಿ ಖಾದರ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ,ಜಿಲ್ಲಾ ಪ್ರಚಾರಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ಸಂಯೋಜಕ ಎಂ ವೆಂಕಪ್ಪ ಗೌಡ, ಕೆಪಿಸಿಸಿ ಮಾಧ್ಯಮ ವಕ್ತಾರ ಟಿ. ಎಂ. ಶಹೀದ್, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಪ್ರಧಾನ ಕಾರ್ಯದರ್ಶಿ ಕೆ ಎಂ ಮುಸ್ತಫ, ಕೆಪಿಸಿಸಿ ಸಂಯೋಜಕ ಕೃಷ್ಣಪ್ಪ, ನಂದಕುಮಾರ್, ಡಾ. ರಘು, ಪಕ್ಷದ ಧುರೀಣರುಗಳಾದ ಪ್ರಹ್ಲಾದ್ ಮೊದಲಾದವರು ಉಪಸ್ಥಿತರಿದ್ದರು.