ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿಯಾದ ಸಂಪಾಜೆ ನಿಯೋಗ…

ಸುಳ್ಯ: ಕೆಪಿಸಿಸಿ ಕಾರ್ಯದರ್ಶಿ ಹಾಗು ಮುಖ್ಯ ವಕ್ತಾರ ಟಿ. ಎಂ ಶಾಹಿದ್ ತೆಕ್ಕಿಲ್ ಅವರ ನೇತೃತ್ವದಲ್ಲಿ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಭೇಟಿಯಾದ ನಿಯೋಗ, ಸಂಪಾಜೆ ಗ್ರಾಮದ ಪ್ಲಾಟಿಂಗ್ ಸಮಸ್ಯೆ ಹಾಗೂ ಸ್ಮಶಾನ ಸಮಸ್ಯೆ ಬಗ್ಗೆ ಸಚಿವರ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಸಚಿವರು ಎರಡೂವರೆ ಎಕ್ರೆ ಸ್ಮಶಾನ ಸ್ಥಳ ನೀಡಲು ಅವಕಾಶ ಇದ್ದು ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು, ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ, ಸುಂದರಿ ಮುಂಡಡ್ಕ, ಉಪಾಧ್ಯಕ್ಷರಾದ ಎಸ್. ಕೆ. ಹನೀಫ್, ಫಾರ್ವರ್ಡ್ ಗ್ರೂಪ್ ನ ಡಾ. ಉಮ್ಮರ್ ಬೀಜದಕಟ್ಟೆ, ಸಲೀಂ ಪೆರುಂಗೋಡಿ, ಹಾರಿಸ್ ಪಿ. ಎಂ, ಅಯ್ಯುಬ್ ಗೂನಡ್ಕ, ಮಂಜುನಾಥ್, ಉನೈಸ್ ಗೂನಡ್ಕ, ಹನೀಫ್ ಕಲ್ಲುಗುಂಡಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಿಕ್ ಕೊಕ್ಕೋ, ಮೊದಲದವರು ಉಪಸ್ಥಿತರಿದ್ದರು.

Sponsors

Related Articles

Back to top button