ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ಓಣಂ ಆಚರಣೆ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್‍ಪ್ರಸನ್ನ.ಕೆ ವಿದ್ಯಾರ್ಥಿಗಳು ರಚಿಸಿದ ಪೂಕಳಂನ ಎದುರು ದೀಪ ಬೆಳಗಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂತಹ ಪ್ರಾದೇಶಿಕ ಹಬ್ಬವನ್ನು ಎಲ್ಲರೂ ಸೇರಿ ಆಚರಿಸುವುದರಿಂದ ವಿದ್ಯಾರ್ಥಿಗಳಿಗೆ ವಿವಿಧ ಸಂಸ್ಕೃತಿ ಮತ್ತು ಆಚರಣೆಗಳ ಪರಿಚಯವಾಗುತ್ತದೆ ಹಾಗೂ ಅದರ ಮಹತ್ವವು ತಿಳಿಯುತ್ತದೆ ಎಂದರು. ನಾನಾ ಪ್ರದೇಶಗಳ ವಿದ್ಯಾರ್ಥಿಗಳಿರುವ ಸಂಸ್ಥೆಗಳಲ್ಲಿ ನಡೆಯುವ ಆಚರಣೆಗಳು ದೇಶದ ಏಕತೆ ಮತ್ತು ಸಮಗ್ರತೆಗಳನ್ನು ಬೆಳೆಸುವುದಕ್ಕೆ ಸಹಕಾರಿಯಾಗುತ್ತದೆ ಎಂದರು.
ಕೇರಳದ ಸಾಂಪ್ರದಾಯಿಕ ನೃತ್ಯ ತಿರುವಾತಿರವನ್ನು ವಿದ್ಯಾರ್ಥಿನಿಯರು ಈ ಸಂದರ್ಭದಲ್ಲಿ ಅಭಿನಯಿಸಿದರು.
ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡರು.
ಕೋವಿಡ್-19 ರ ನಿಯಮಾವಳಿಯಂತೆ ಕಾರ್ಯಕ್ರಮವನ್ನು ನಡೆಸಲಾಯಿತು.

Sponsors

Related Articles

Back to top button