ಸೆ.30ರಿಂದಲೇ ದಸರಾ ರಜೆ ನೀಡುವಂತೆ ಸಚಿವರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ……

ಮಂಗಳೂರು: ಮಂಗಳೂರಿನಲ್ಲಿ ನವರಾತ್ರಿ ಸಂಭ್ರಮ ಸೆಪ್ಟೆಂಬರ್ 30ರಿಂದಲೇ ಆರಂಭವಾಗುವ ಹಿನ್ನಲೆಯಲ್ಲಿ ದಸರಾ ರಜೆಯನ್ನು ಈ ಸಮಯಕ್ಕೇ ಮಂಜೂರು ಮಾಡಬೇಕೆಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ರಾಜ್ಯ ಪ್ರಾರ್ಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿಯಾದ ಶಾಸಕ ಕಾಮತ್ ಅವರು ಮಂಗಳೂರು ದಸರಾ ಅತ್ಯಂತ ಸಂಭ್ರಮದಿಂದ ಆಚರಿಸಲ್ಪಡುತ್ತದೆ, ಮಂಗಳೂರಿನಲ್ಲಿ ನವರಾತ್ರಿಯ ಧಾರ್ಮಿಕ ವಿಧಿವಿಧಾನಗಳು ಸೆಪ್ಟೆಂಬರ್ 28 ರಿಂದಲೇ ಆರಂಭವಾಗುತ್ತದೆ. ದೇವಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ, ಹವನ, ಕಾರ್ಯಕ್ರಮಗಳು ಪ್ರಾರಂಭವಾಗುವುದರಿಂದ ಅದರಲ್ಲಿ ಭಾಗವಹಿಸುವ ಪೋಷಕರಿಗೆ, ಮಕ್ಕಳಿಗೆ, ಶಿಕ್ಷಕರಿಗೆ ರಜೆ ಇದ್ದಲ್ಲಿ ಸಾಕಷ್ಟು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.
ಮಾನ್ಯ ಸಚಿವರು ಈ ಬಗ್ಗೆ ಪರಾಮರ್ಶಿಸಿ ರಜೆಯನ್ನು ಸೆಪ್ಟೆಂಬರ್ 30 ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಸುತ್ತೋಲೆಯನ್ನು ಹೊರಡಿಸಬೇಕು ಎಂದು ಮನವಿ ಮಾಡಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button