ಸೋಮವಾರದ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ….

ಬೆಂಗಳೂರು: ಸೋಮವಾರ (ಮಾ.23) ನಡೆಯಬೇಕಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪತ್ರಿಕೆಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಇಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕೊರೋನಾ ಎಲ್ಲೆಡೆ ವ್ಯಾಪಿಸುತ್ತಿರುವುದರಿಂದ ರಾಜ್ಯ ಸರಕಾರ 9 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಘೋಷಿಸಿದೆ. ಹೀಗಾಗಿ, ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತದೆ ಎಂಬ ಕಾರಣಕ್ಕೆ ಅನಿವಾರ್ಯವಾಗಿ ಪರೀಕ್ಷೆ ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ.ಮರು ವೇಳಾಪಟ್ಟಿಯನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು. ರಾಜ್ಯ ಸರಕಾರ ಕೊರೋನಾ ಸೋಂಕಿನ ವಿರುದ್ಧ ಸಮರ ಸಾರಿರುವ ಹಿನ್ನೆಲೆಯಲ್ಲಿ ನಾವು ಅದಕ್ಕೆ ಸ್ಪಂದಿಸಬೇಕಿದೆ. ಹೀಗಾಗಿ ಪರೀಕ್ಷೆ ನಡೆಯುವುದಿಲ್ಲ nಎಂದು ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button