“ಸ್ವಚ್ಚ ಭಾರತ ಸ್ವಚ್ಚ ಮನಸ್ಸು” ಅಭಿಯಾನ….

ಬಂಟ್ವಾಳ:ದೇಹದ ಸ್ವಚ್ಛತೆಯಿಂದ ದೇಶದ ಸ್ವಚ್ಛತೆಗೆ ವಿದ್ಯಾರ್ಥಿಗಳನ್ನು ಪ್ರೆರೇಪಿಸಬೇಕು. ವಿದ್ಯಾರ್ಥಿಗಳು ನಾಗರಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಸಾಮಾಜಿಕ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ದೀಪಿಕಾ ಪ್ರೌಢ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್ ಹೇಳಿದರು.
ಅವರು ಬಂಟ್ವಾಳ ಎಸ್.ವಿ.ಎಸ್ ಪೌಢ ಶಾಲೆಯಲ್ಲಿ ರಾಮಕೃಷ್ಣ ಮಿಶನ್ ಮಂಗಳೂರು ಇವರ ಆಶ್ರಯದಲ್ಲಿ “ಸ್ವಚ್ಚ ಭಾರತ ಸ್ವಚ್ಚ ಮನಸ್ಸು” ಅಭಿಯಾನದ ಅಂಗವಾಗಿ ಏರ್ಪಡಿಸಲಾದ ಸ್ವಚ್ಚತಾ ದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ವಿದ್ಯಾರ್ಥಿಗಳು ಸ್ವಚ್ಚತಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಮುಖ್ಯ ಶಿಕ್ಷಕಿ ನಂದಿನಿ ಬಾಯಿ, ಸಂಯೋಜಕಿ ಉಷಾ ಉಪಸ್ಥಿತರಿದ್ದರು.

 

Sponsors

Related Articles

Leave a Reply

Your email address will not be published. Required fields are marked *

Back to top button