ಹಂಗಾಮಿ ಪೌರ ನೌಕರರ ಖಾಯಂ – ಶಾಸಕ ಮಂಜುನಾಥ ಭಂಡಾರಿ ಸ್ವಾಗತ…

ಬೆಂಗಳೂರು: ರಾಜ್ಯದ 312 ಪೌರಸಂಸ್ಥೆಗಳ 25 ಸಾವಿರಕ್ಕೂ ಹೆಚ್ಚಿನ ಹಂಗಾಮಿ ನೌಕರರನ್ನು ಖಾಯಂ ಮಾಡಲು ಹಾಗೂ ಕಾಯಂ ಮಾಡಲು ಸಾಧ್ಯವಾಗದಿರುವ ನೌಕರರಿಗೆ ನೇರ ನಗದು ಪಾವತಿ ವ್ಯವಸ್ಥೆ ವ್ಯಾಪ್ತಿಗೆ ತರಲು, ಸರ್ಕಾರ ಈಗಾಗಲೇ ಕಾರ್ಯೋನ್ಮುಖವಾಗಿರುವ ಕುರಿತು ವರದಿಯಾಗಿದೆ.
ಈ ಬಗ್ಗೆ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಮಂಜುನಾಥ ಭಂಡಾರಿಯವರು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ 986 ಕ್ಕೆ ಉತ್ತರಿಸಿರುವ ಮಾನ್ಯ ಪೌರಾಡಳಿತ ಸಚಿವರು, ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಹೊರಗುತ್ತಿಗೆ ಹಾಗೂ ದಿನಗೂಲಿ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೀರು ಸರಬುರಾಜು ಸಹಾಯಕರು/ಹೆಲ್ಪರ್/ವಾಲ್ವಮನ್‍ಗಳನ್ನು ವಿಶೇಷ ನೇಮಕಾತಿಯಡಿ ಪರಿಗಣಿಸುವ ಕುರಿತು ಹಾಗೂ ಖಾಯಂ ಮಾಡಲು ಸಾಧ್ಯವಾಗದಿರುವ ನೌಕರರಿಗೆ ನೇರ ನಗದು ಪಾವತಿ ವ್ಯವಸ್ಥೆ ವ್ಯಾಪ್ತಿಗೆ ತರವುದಾಗಿ ಲಿಖಿತ ಉತ್ತರ ನೀಡಿದ್ದರು.
ಶಾಸಕರು ಸರ್ಕಾರದ ಈ ತೀರ್ಮಾನವನ್ನು ಸ್ವಾಗತಿಸಿದ್ದು, ಈ ಬಗ್ಗೆ ಸರ್ಕಾರ ಕೂಡಲೇ ಮುಂದಿನ ಕ್ರಮಕೈಗೊಂಡು ಪೌರಸಂಸ್ಥೆಗಳ ಹಂಗಾಮಿ ನೌಕರರ ಹಿತ ಕಾಯಬೇಕಾಗಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

Sponsors

Related Articles

Back to top button