ಹತ್ಯೆಯಾದ ಕಾರ್ತಿಕ್ ಸುವರ್ಣ ಮನೆಗೆ ಹಿಂದೂ ಸಂಘಟನೆ ಮುಖಂಡರ ಭೇಟಿ, ಸಾಂತ್ವನ…..

ಪುತ್ತೂರು: ಇತ್ತೀಚೆಗೆ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಅವರ ಮನೆಗೆ ಬುಧವಾರ ವಿಶ್ವ ಹಿಂದೂ ಪರಿಷದ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ, ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ಬಸವರಾಜ್ ಮತ್ತಿತರ ಪ್ರಮುಖರು ಭೇಟಿ ನೀಡಿ ಮೃತನ ಮನೆಯವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್, ಪುತ್ತೂರು ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್., ಪುತ್ತೂರು ಜಿಲ್ಲಾ ಬಜರಂಗದಳ ಸಂಚಾಲಕ ಶ್ರೀಧರ ತೆಂಕಿಲ, ವಿಶ್ವ ಹಿಂದೂ ಪರಿಷತ್ ಪ್ರಮುಖರಾದ ನರಸಿಂಹ ಪೂಂಜಾ, ಪುತ್ತೂರು ಪ್ರಖಂಡ ಬಜರಂಗದಳ ಸಹ ಸಂಚಾಲಕ ಜಯಂತ ಕುಂಜೂರುಪಂಜ ಮತ್ತಿತರರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button