1ರಿಂದ 8ರವರೆಗೆ ಎಲ್ಲಾ ಮಕ್ಕಳು ಪರೀಕ್ಷೆ ಇಲ್ಲದೆ ಪಾಸ್….

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಜಾರಿಯಲ್ಲಿರುವ ಕಾರಣ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಬಗ್ಗೆ ಕೆಲ ಗೊಂದಲಗಳು ಇವೆ. ಹೀಗಾಗಿ ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಫೇಸ್‍ಬುಕ್ ಲೈವ್ ವಿಡಿಯೋ ಮೂಲಕ ಗೊಂದಲಗಳಿಗೆ ಸ್ಪಷ್ಟಣೆ ನೀಡಿದ್ದಾರೆ.
ಪರೀಕ್ಷೆಗಳ ಬಗ್ಗೆ ಮಾತನಾಡಿದ ಸಚಿವರು, 7,8,9, ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆ ಕುರಿತು ಇರುವ ಗೊಂದಲಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ. 7,8 ಹಾಗೂ 9ನೇ ತರಗತಿಗೆ ಪರೀಕ್ಷೆ ಇಲ್ಲ. 7 ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಮುಂದಿನ ತರಗತಿಗೆ ಪಾಸ್ ಮಾಡಿ ಕಳುಹಿಸಲಾಗುತ್ತದೆ ಎಂದು ತಿಳಿಸಿದರು.
ಆದರೆ 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳ ಹಂತದಲ್ಲಿ ಆಂತರಿಕ ಪರೀಕ್ಷೆ ರೂಪಣಾತ್ಮಕ, ಮತ್ತು ಸಂಕಲನಾತ್ಮಕ ಪರೀಕ್ಷೆ ನಡೆಸಲಾಗಿದೆ. ಅದರ ಆಧಾರದಲ್ಲಿ 9ನೇ ತರಗತಿ ವಿದ್ಯಾರ್ಥಿಗಳನ್ನ 10ನೇ ತರಗತಿಗೆ ಪಾಸ್ ಮಾಡಬೇಕು. ಒಂದು ವೇಳೆ ಶಾಲೆಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗದೇ ಇದ್ದರೆ ರಜೆ ಅವಧಿಯಲ್ಲಿ ವಿದ್ಯಾರ್ಥಿಯ ಕಲಿಕಾ ಮಟ್ಟ ಉತ್ತಮಗೊಳಿಸಬೇಕು. ಜೂನ್ ಒಳಗೆ ಫೇಲ್ ಆದ ವಿದ್ಯಾರ್ಥಿಗಳಿಗೆ ಮತ್ತೊಂದು ಪರೀಕ್ಷೆ ಕೊಡಬೇಕು. ನಂತರ ಅವರನ್ನು ಪಾಸ್ ಮಾಡುವ ನಿರ್ಧಾರವನ್ನು ಶಾಲೆಗಳು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button