ತೆಂಗು ಸೌಹಾರ್ದ ಸಹಕಾರಿ ಆಡಳಿತ ಮಂಡಳಿ ಸಭೆ…

ಬಂಟ್ವಾಳ : ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಬಿ.ಸಿ.ರೋಡ್ ಇದರ ಆಡಳಿತ ಮಂಡಳಿಯ ಸಭೆಯು ಸಹಕಾರಿಯ ಅಧ್ಯಕ್ಷ ರಾಜಾ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ಜ. 29ರಂದು ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಹಕಾರಿಯ ಉಪಾಧ್ಯಕ್ಷ , ಚೈತನ್ಯ ಶ್ರೀ ಪ್ರಶಸ್ತಿ ಪುರಸ್ಕೃತ ಜಯಾನಂದ ಪೆರಾಜೆ ಮತ್ತು ನರಿಕೊಂಬು ಗ್ರಾ.ಪಂ. ನೂತನ ಸದಸ್ಯರಾಗಿ ಚುನಾಯಿತರಾದ ಸಹಕಾರಿಯ ನಿರ್ದೇಶಕ ನಾರಾಯಣ ಪೂಜಾರಿ ದರ್ಖಾಸು ಅವರಿಗೆ ಶಾಲು ಹೊದಿಸಿ, ಗುಲಾಬಿ ನೀಡಿ ಅಭಿನಂದಿಸಿ, ಗೌರವಿಸಲಾಯಿತು. ಸಹಕಾರಿಯ ಅಧ್ಯಕ್ಷ ರಾಜಾ ಬಂಟ್ವಾಳ್ ಸಮ್ಮಾನಿಸಿದರು.
ನಿರ್ದೇಶಕ ಪ್ರೇಮನಾಥ ಶೆಟ್ಟಿ ಅಂತರ ಅಭಿನಂದನಾ ಭಾಷಣ ಮಾಡಿದರು.
ವೇದಿಕೆಯಲ್ಲಿ ನಿರ್ದೇಶಕರಾದ ಸದಾಶಿವ ಬಂಗುಲೆ, ಕೃಷ್ಣ ಭಂಡಾರಿ, ಶಶಿಕಲಾ, ಶರಣಪ್ಪ ಉಮ್ಮರಗಿ ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷಿತ್ ಕುಮಾರ್ ಸ್ವಾಗತಿಸಿ, ವರದಿ ವಾಚಿಸಿದರು. ನಿರ್ದೇಶಕಿ ಅಂಬಿಕಾ ಹರೀಶ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related Articles

Leave a Reply

Your email address will not be published. Required fields are marked *

Back to top button