ಖ್ಯಾತ ಕವಿ ಲಕ್ಷ್ಮೀ ನಾರಾಯಣ ಭಟ್ಟ ಇನ್ನಿಲ್ಲ…

ಬೆಂಗಳೂರು: ಖ್ಯಾತ ಕವಿ ಎನ್.‌ಎಸ್. ಲಕ್ಷ್ಮೀ ನಾರಾಯಣ ಭಟ್ಟರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಎನ್‌ಎಸ್‌ಎಲ್‌ ಎಂದೇ ಖ್ಯಾತರಾಗಿರುವ ಅವರ ಪೂರ್ಣ ಹೆಸರು ನೈಲಾಡಿ ಶಿವರಾಮ ಲಕ್ಷ್ಮೀ ನಾರಾಯಣ ಭಟ್ ಅವರು 1936ರ ನವೆಂಬರ್ 29ರಂದು ಶಿವಮೊಗ್ಗದಲ್ಲಿ ಜನಿಸಿದ್ದರು. ಬೆಂಗಳೂರಿನಲ್ಲಿ ಕಾಲೇಜು ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ ಲಕ್ಷ್ಮೀ ನಾರಾಯಣ ಅವರು ಬಳಿಕ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ, ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.
ವೃತ್ತಿ, ಸುಳಿ, ನಿನ್ನದೇ ನನ್ನ ಮಾತು, ಹೊಳೆಯ ಸಾಲಿನ ಮರ, ಪಾಂಚಾಲಿ, ಅರುಣಗೀತೆ, ಚಿತ್ರಕೂಟ, ದೀಪಿಕಾ, ಬಾರೋ ವಸಂತ, ಸುನೀತಾ ಮೊದಲಾದ ಕವನ ಸಂಕಲನಗಳನ್ನು ಲಕ್ಷ್ಮೀ ನಾರಾಯಣ ಭಟ್ಟ ಅವರು ಬರೆದಿದ್ದಾರೆ.
ಎಲ್ಲಿ ಜಾರಿತೋ ಮನವು, ಎಲ್ಲೆ ಮೀರಿತೋ ಭಾವಗೀತೆ ಎನ್‌ಎಸ್‌ಎಲ್ ಅವರಿಗೆ ಅತ್ಯಂತ ಹೆಚ್ಚಿನ ಖ್ಯಾತಿಯನ್ನು ಗಳಿಸಿಕೊಟ್ಟಿತ್ತು.

Related Articles

Leave a Reply

Your email address will not be published. Required fields are marked *

Back to top button