ತರಕಾರಿ ಕೃಷಿಯ ಭೀಷ್ಮ ಧರ್ಣಪ್ಪ ಗೌಡ ಕುಂಟ್ಯಾನ ನಿಧನ….

ಪುತ್ತೂರು: ತರಕಾರಿ ಕೃಷಿಯ ಭೀಷ್ಮ ಎಂದೇ ಪ್ರಸಿದ್ದರಾದ ಬನ್ನೂರು ಗ್ರಾಮದ ಧರ್ಣಪ್ಪ ಗೌಡ ಕುಂಟ್ಯಾನ ಮಾ.22 ರಂದು
ಚಾರ್ವಾಕ ಗ್ರಾಮದ ಕುಂಟ್ಯಾನ ಫಾರ್ಮ್‌ ನಲ್ಲಿ ನಿಧನರಾದರು.
50 ವರ್ಷಗಳಿಂದ ತರಕಾರಿ ಕೃಷಿಯಲ್ಲಿ ಪರಿಣಿತರಾಗಿದ್ದ ಅವರು ಚಾರ್ವಾಕ, ಸಂಪ್ಯ, ಮಾಡಾವುಗಳಲ್ಲಿ ಜಾಗವನ್ನು
ಖರೀದಿಸಿ ತನ್ನ ಕೃಷಿ ಕ್ಷೇತ್ರದ ಸಾಧನೆಯನ್ನು ವಿಸ್ತರಿಸಿದ್ದರು. ಅವರ ಸಾಧನೆಯನ್ನು ಗುರುತಿಸಿ ಹಲವು ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿದೆ.
ಮೃತರು ಪತ್ನಿ ಚೆನ್ನಮ್ಮ, ಪುತ್ರ ಪ್ರವೀಣ್‌ ಕುಂಟ್ಯಾನ, ಪುತ್ರಿ ಸುಚಿತ್ರಾ, ಸುಮಿತ್ರಾ, ಅಳಿಯಂದಿರಾದ ರಾಧಾಕೃಷ್ಣ, ರವಿ,
ಪುತ್ರಿ ಸುನೀತಾ, ಸೊಸೆ ಸವಿತಾ ಪ್ರವೀಣ್‌ ಹಾಗೂ ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button