ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ಸಿಇಟಿ ಸಲಹಾ ಕೇಂದ್ರ…

ಪುತ್ತೂರು: ಸಿಇಟಿ ಪರೀಕ್ಷೆ ಬರೆದು ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು ತಮ್ಮ ಮೂಲ ದಾಖಲೆಗಳನ್ನು ಸಿಇಟಿ ವೆಬ್‍ಸೈಟಿಗೆ ಅಪ್‍ಲೋಡ್ ಮಾಡಬೇಕಿದ್ದು ಅದರ ಪರಿಷ್ಕೃತ ವೇಳಾಪಟ್ಟಿ ಮತ್ತು ಅಗತ್ಯ ದಾಖಲೆಗಳ ಪಟ್ಟಿಯನ್ನು ಸಿಇಟಿ ವೆಬ್‍ಸೈಟಿನಲ್ಲಿ ನೀಡಿರುತ್ತಾರೆ. ಈ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಲಹಾ ಕೇಂದ್ರವನ್ನು ತೆರೆಯಲಾಗಿದ್ದು, ಅಪ್ಲೋಡ್ ಪ್ರಕ್ರಿಯೆಗೆ ಬೇಕಾದ ಸವಲತ್ತು ಮತ್ತು ಸಹಕಾರವನ್ನು ನೀಡಲಾಗುತ್ತದೆ. ಸಿಇಟಿ ಪ್ರಕ್ರಿಯೆ ಮುಗಿಯುವವರೆಗೂ ಸಲಹಾ ಕೇಂದ್ರವು ಕಾರ್ಯನಿರ್ವಹಿಸುತ್ತದೆ. ಆಸಕ್ತ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಕಾಲೇಜಿಗೆ ಭೇಟಿ ನೀಡಿ ಈ ಸೌಲಭ್ಯದ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಪ್ರಾಂಶುಪಾಲ ಡಾ. ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button