ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ – ರಸ್ತೆ ಕಾಂಕ್ರಿಟೀಕರಣಕ್ಕಾಗಿ ಸ್ಥಳ ಪರಿಶೀಲನೆ…

ಬಂಟ್ವಾಳ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ಸಜೀಪಮುನ್ನೂರು ಇಲ್ಲಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಂಕ್ರಿಟೀಕರಣ ಗೊಳಿಸಲು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಸೂಚನೆಯಂತೆ ಕೆ ಆರ್ ಡಿ ಎಲ್ ಸಹಾಯಕ ಅಭಿಯಂತರ ರಕ್ಷಿತ್, ಗುತ್ತಿಗೆದಾರ ಸೀತಾರಾಮ ಸ್ಥಳ ಪರಿಶೀಲನೆ ನಡೆಸಿದರು.
ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ ಕೃಷ್ಣ ಶಾಮ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ ಸುಬ್ರಹ್ಮಣ್ಯ ಭಟ್, ಸ್ವಾಗತ ಸಮಿತಿಯ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಚರಣ್, ಪ್ರಶಾಂತ್ ಗಟ್ಟಿ, ಸುಕೇಶ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button