ಸುಳ್ಯ ನ್ಯಾಯಾಲಯಕ್ಕೆ ಹಾಜರಾದ ಡಿ.ಕೆ. ಶಿವಕುಮಾರ್…

ಸುಳ್ಯ:ಕೆಪಿಸಿಸಿ ಅಧ್ಯಕ್ಷ , ಮಾಜಿ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಸುಳ್ಯಕ್ಕೆ ಆಗಮಿಸಿದ್ದಾರೆ. 11 ಗಂಟೆಗೆ ಸುಳ್ಯಕ್ಕೆ ಆಗಮಿಸಿದ ಅವರಿಗೆ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು.
ನಂತರ ಸುಳ್ಯ ನ್ಯಾಯಾಲಯಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ, ಮಾಜಿ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರು ಸಹಾಯಕ ಅಭಿಯೋಜಕರು ಮತ್ತು ವಕೀಲರ ಜೊತೆ ಮಾತುಕತೆ ನಡೆಸಿದ ಬಳಿಕ ನ್ಯಾಯಾಲಯ ಕಲಾಪಕ್ಕೆ ಹಾಜರಾಗಿ ಸಾಕ್ಷ್ಯ
ನುಡಿದರು. ಅವರು ಅರ್ಧ ಗಂಟೆಗಳ ಕಾಲ ಎಪಿಪಿ ಮತ್ತು ವಕೀಲರ ಜೊತೆ ಮಾತುಕತೆ ನಡೆಸಿ 11.30ಕ್ಕೆ ನ್ಯಾಯಾಲಯ ಕಲಾಪಕ್ಕೆ ಹಾಜರಾದರು. ವಿದ್ಯುತ್‌ ಸಮಸ್ಯೆ ಸಂಬಂಧಪಟ್ಟು ಡಿ.ಕೆ.ಶಿವಕುಮಾರ್‌ ಮತ್ತು ಬೆಳ್ಳಾರೆಯ ಸಾಯಿ ಗಿರಿಧರ್‌ ನಡುವಿನ ಫೋನ್‌ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿ ಶಿವಕುಮಾರ್‌ ಅವರು ಸುಳ್ಯ ನ್ಯಾಯಾಲಯಕ್ಕೆ ಆಗಮಿಸಿ ಸಾಕ್ಷ್ಯ ನುಡಿದರು.

2ad719c6 00d9 416a Bb32 Ae7ce246b0b1 300x167

516bb094 3205 4559 Af84 Abde2abd2f27 300x225

72f18dc7 D228 4ce9 9bda 2618e114b8c3 225x300

Related Articles