ಅರಂತೋಡು ಮದರಸದಲ್ಲಿ ಅಗಲಿದ ಸಮಸ್ತ ನೇತಾರರಿಗೆ ವಿಶೇಷ ಪ್ರಾರ್ಥನೆ…

ಸುಳ್ಯ: ನುಸ್ರತುಲ್ ಇಸ್ಲಾಂ ಮದರಸ ಅರಂತೋಡು ಇದರ ವತಿಯಿಂದ ಸಮಂಸ್ತ ಕೇರಳ ಮತ ವಿಧ್ಯಾಭ್ಯಾಸ ಬೋರ್ಡ್ ವರ್ಷಪ್ರತಿ ನಡೆಸಿಕೊಂಡು ಬರುವ ಪ್ರಾರ್ಥನಾ ದಿನವನ್ನು ನ. 7 ರಂದು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಜಮಾ ಅತ್ ಅಧ್ಯಕ್ಷ ಅಸ್ರಫ್ ಗುಂಡಿ ವಹಿಸಿದರು.ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ಹಾಖ್ ಬಾಖವಿ ದುವಾ ನೆರವೇರಿಸಿ ಮಾತನಾಡಿ ಸಮಸ್ತ ಇತರ ಸ್ಥಾಪನೆಗಳಿಗೆ ರಾಜ್ಯದಲ್ಲಿ ದೇಶದಲ್ಲಿ ಹಾಗೂ ವಿದೇಶದಲ್ಲಿ ಸ್ಥಾಪಿಸಿ ಸಮುದಾಯದ ಉನ್ನತಿಗೆ ಶ್ರಮಿಸಿ ನಮ್ಮನ್ನಗಲಿದ ಉಲಮಾ ಉಮಾರಾ ಸೇವೆಯನ್ನು ಕೊಂಡಾಡಿದರು.ನುಸ್ರತುಲ್ ಇಸ್ಲಾಂ ಮದರಸ ಸದರ್ ಮುಅಲ್ಲಿಂ ಹನೀಫ್ ದಾರಿಮಿ ಪ್ರಾಸ್ತಾವಿಕ ಭಾಷಣ ಮಾಡಿದರು.
ಮುಖ್ಯ ಅತಿಥಿಗಳಾಗಿ ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಹಾಗೂ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಗೌರವಾಧ್ಯಕ್ಷ ಟಿ.ಎಮ್.ಶಹೀದ್,ಜಮಾ ಅತ್ ಕಾರ್ಯದರ್ಶಿ ಕೆ.ಎಮ್.ಮೂಸಾನ್,ಸ್ವಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್,ಮದರಸ ಮ್ಯಾನೇಜ್‌ಮೆಂಟ್ ಸಂಚಾಲಕ ಅಮೀರ್ ಕುಕ್ಕುಂಬಳ, ಅನ್ವಾರುಲ್ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಮಜೀದ್,ಸೌದಿ ಸಮಿತಿ ಪ್ರತಿನಿಧಿ ಕೆ.ಎಮ್.ಉಸ್ಮಾನ್,ಜೊತೆ ಕಾರ್ಯದರ್ಶಿ ಎ. ಹನೀಫ್ ಎಸ್ .ಕೆ.ಎಸ್.ಎಸ್.ಎಫ್.ಕಾರ್ಯದರ್ಶಿ ಜುಬೈರ್,ಎಸ್.ಇ.ಹನೀಫ್,ಮುಝ್ಝಮ್ಮಿಲ್ ಕುಕ್ಕುಂಬಳ,ಎ.ಹಮೀದ್,ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .ಸಹಾಯಕ ಅಧ್ಯಾಪಕ ಸಾಜಿದ್ ಅಝ್ಝಹರಿ ವಂದಿಸಿದರು.

Dee814fc 4dd5 4077 8acf 603256fe4a35 300x225

Related Articles