ದೇವಪ್ಪ ಮಡಿವಾಳ ನಿಧನ – ಶ್ರದ್ಧಾಂಜಲಿ ಸಭೆ…

ಬಂಟ್ವಾಳ: ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜೀಪಮುನ್ನೂರು ಇದರ ವ್ಯವಸ್ಥಾಪನ ಸಮಿತಿ ಸದಸ್ಯ ದೇವಪ್ಪ ಮಡಿವಾಳ ಇವರ ನಿಧನಕ್ಕೆ ಶ್ರದ್ಧಾಂಜಲಿ ಸಭೆ ದೇವಾಲಯದ ಸಭಾಂಗಣದಲ್ಲಿ ಸಜಿಪಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್ ಅಧ್ಯಕ್ಷತೆಯಲ್ಲಿ ಫೆ. 7 ರಂದು ಜರಗಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಎನ್ ಕೆ ಶಿವ, ಧನೇಶ್ವರ ರಾವ್, ಕೃಷ್ಣ ಭಟ್ ಮೃತರು ದೇವಸ್ಥಾನಕ್ಕೆ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು. ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದೇವಸ್ಥಾನ ಸಮಿತಿ ಅಧ್ಯಕ್ಷ ಎಂ ಕೃಷ್ಣ ಶಾಮ್, ಹರಿ ಪ್ರಸಾದ್ ಭಂಡಾರಿ, ಶ್ರೀನಿವಾಸ್ ನಾಯಕ್, ಚಿತ್ರ ಎಸ್ ರೈ, ಧನಂಜಯ ಶೆಟ್ಟಿ, ದೀಕ್ಷಿತ್ ಶೆಟ್ಟಿ, ರಾಮ, ರಾಜು ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button