ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿ – ಚಂಪಾಷಷ್ಠಿ…

ಬಂಟ್ವಾಳ: ಬ್ರಹ್ಮಶ್ರೀ ನೀಲೇಶ್ವರ ಕೆ ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವರ್ಷಂಪ್ರತಿಯಂತೆ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿ, ಸಜೀಪಮುನ್ನೂರು ಇಲ್ಲಿ ಚಂಪಾಷಷ್ಠಿಯ ಪ್ರಯುಕ್ತ ಶ್ರೀ ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ ಅಭಿಷೇಕ, ಸಾನಿಧ್ಯ ಕಲಶಾಭಿಷೇಕ, ಗಣಹೋಮ, ಆಶ್ಲೇಷ ಬಲಿ ಹೋಮ, ಆಶ್ಲೇಷ ಬಲಿ ಪೂಜೆ, ನಾಗತಂಬಿಲ, ಕಾರ್ತಿಕ ಪೂಜೆ ವಿಜೃಂಭಣೆಯಿಂದ ಜರಗಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಸಜಿಪ ಮಾಗಣೆ ತಂತ್ರಿ ಎo ಸುಬ್ರಮಣ್ಯ ಭಟ್, ಅರ್ಚಕ ಕೃಷ್ಣ ಭಟ್, ಹರಿಪ್ರಸಾದ್ ಭಂಡಾರಿ, ಚಿತ್ರ ಎಸ್. ರೈ, ಎನ್ ಕೆ ಶಿವ, ದೇವಪ್ಪ ಮಡಿವಾಳ, ರಾಜು ಪೂಜಾರಿ, ಚಿತ್ರ, ಶ್ರೀನಿವಾಸ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button