ಪುತ್ತೂರು ತಾಲೂಕಿನ ಅರ್ಯಾಪು ಕಳವು ಆರೋಪಿ ಬಂಧನ……

ಪುತ್ತೂರು: ಕಳೆದ ಎರಡೂವರೆ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಅರ್ಯಾಪು ಗ್ರಾಮದ ದೇವಸ್ಯ ಎಂಬಲ್ಲಿ ಮನೆಯೊಂದರಿಂದ ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳವು ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಡಬ ತಾಲೂಕಿನ ಕೊಯ್ಲ ನಿವಾಸಿ ಇಬ್ರಾಹಿಂ ಕಲಂದರ್(31) ಬಂಧಿತ ಆರೋಪಿ. ಜು.3ರಂದು ದೇವಸ್ಯ ನಿವಾಸಿ ರಂಜಿತ್ ರೈ ಎಂಬವರ ಮನೆಯಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಾಗಿಲು ಮುರಿದು ಮನೆಯೊಳಗೆ ಕಪಾಟಿನಲ್ಲಿ ಇರಿಸಲಾಗಿದ್ದ ಚಿನದ ಕಳ್ಳತನ ನಡೆದಿತ್ತು. ಈ ಬಗ್ಗೆ ಸಂಪ್ಯ ಠಾಣೆಗೆ ರಂಜಿತ್ ರೈ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಅವರ ಮಾರ್ಗದರ್ಶನದಂತೆ ಸಂಪ್ಯ ಠಾಣೆಯ ಎಸ್‍ಐ ಸಕ್ತಿವೇಲು, ಸಿಬ್ಬಂದಿಗಳಾದ ಅದ್ರಾಮ, ವಿನಯ ಕುಮಾರ್ ಅವರು ಕಾರ್ಯಾಚರಣೆ ನಡೆಸಿ ವಿಟ್ಲದಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Related Articles

Leave a Reply

Your email address will not be published. Required fields are marked *

Back to top button