ಶ್ರೀ ಸದಾಶಿವ ದೇವಸ್ಥಾನ ಈಶ್ವರಮಂಗಲ ಸಜಿಪಮೂಡ – ಪೂರ್ವಭಾವಿ ಸಿದ್ಧತಾ ಸಭೆ…

ಬಂಟ್ವಾಳ : ಶ್ರೀ ಸದಾಶಿವ ದೇವಸ್ಥಾನ ಈಶ್ವರಮಂಗಲ ಸಜಿಪಮೂಡ ಬಂಟ್ವಾಳ ಇದರ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಮಹಾಶಿವರಾತ್ರಿ ಪೂಜ್ಯೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ ಜ. 16 ರಂದು ನಡೆಯಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ ದೇವಿ ಪ್ರಸಾದ್ ಪೂಂಜಾ ಅಧ್ಯಕ್ಷತೆ ವಹಿಸಿದ್ದರು. ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಕೋಮಾಲಿ ಕೃಷ್ಣಭಟ್, ಕೆ ಸದಾನಂದ ಶೆಟ್ಟಿ, ಪದ್ಮನಾಭ ಕೊಟ್ಟಾರಿ, ಬಾಲಕೃಷ್ಣ, ರವಿ ಪಂಬದ, ಚಂದ್ರಶೇಖರ್, ಪುರಂದರ ,ವಿಶ್ವನಾಥ್ ಕೊಟ್ಟಾರಿ, ಎಂ ಶಂಕರ್ ನಾರಾಯಣ ಭಟ್ ಮೊದಲಾದವರು ಉಪಸ್ಥಿತರಿದ್ದರು. ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿಸಲು ತೀರ್ಮಾನಿಸಲಾಯಿತು.

Related Articles