ಪುತ್ತಿಗೆ ಮಠದ ಚತುರ್ಥ ಪರ್ಯಾಯದ ಪ್ರಮುಖ ಯೋಜನೆಗಳ ಕೇಂದ್ರ ಕಾರ್ಯಾಲಯ ಅಂತರ್ಯಾಮಿ ಉದ್ಘಾಟನೆ…

ಉಡುಪಿ: 2024-25 ರಲ್ಲಿ ಉಡುಪಿಯ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ನಡೆಯಲಿರುವ ಶ್ರೀ ಪುತ್ತಿಗೆ ಮಠದ ಚತುರ್ಥ ಪರ್ಯಾಯದ ನಿಮಿತ್ತವಾಗಿ ಸಂಕಲ್ಪಿಸಿರುವ ಪ್ರಮುಖ ಯೋಜನೆಗಳ ಕಾರ್ಯಾಲಯ “ಅಂತರ್ಯಾಮಿ” ಕೇಂದ್ರವನ್ನು ಪುತ್ತಿಗೆ ಮಠದ ಪೀಠಾಧಿಪತಿಗಳಾದ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರು ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಪರ್ಯಾಯದ ಪ್ರಮುಖ ಯೋಜನೆಯಾದ ಕೋಟಿಗೀತಾಲೇಖನ ಯಜ್ಞ ದ ಅಭಿಯಾನಕ್ಕೂ ಪೂಜ್ಯ ಶ್ರೀಪಾದರು ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ರತೀಶ್ ತಂತ್ರಿ, ವಿಷ್ಣುಮೂರ್ತಿ ಉಪಾಧ್ಯಾಯ, ಪ್ರಮೋದ ಸಾಗರ್, ಆಸ್ಟ್ರೇಲಿಯಾದ ಪ್ರಸಿದ್ಧ ಯೋಗಗುರು ರಾಜೇಂದ್ರ ವೆಂಕನಮೂಲೆ, ಡಾ. ಸುಗುಣದಾಸ್, ಕೆ.ವಿ.ರಮಣ, ಸಂತೋಷ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು. ವಿದ್ವಾನ್ ಬಿ.ಗೋಪಾಲಾಚಾರ್ ಸ್ವಾಗತಿಸಿ, ನಿರೂಪಿಸಿದರು. ಎಂ ಪ್ರಸನ್ನ ಆಚಾರ್ಯ ವಂದಿಸಿದರು.

A56ec516 07f8 4b59 Be64 41aa0b1e4f9c 300x225

523381ce 372e 47d9 A526 7b06917f07e8 225x300

2f1b1f11 2872 45d1 8e60 Bc40e1e5cd79 300x169

 

Related Articles