ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ – ತುಳು ಯಕ್ಷಗಾನ ತಾಳಮದ್ದಳೆ…

ಬಂಟ್ವಾಳ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ಸಜೀಪ ಮುನ್ನೂರು ಇಲ್ಲಿ ದೃಢ ಕಲಶದ ಅಂಗವಾಗಿ ಭಾನುವಾರದಂದು ಕರ್ನಾಟಕ ಸರಕಾರದ ತುಳು ಸಾಹಿತ್ಯ ಆಕಾಡೆಮಿ ಮಂಗಳೂರು ಪ್ರಾಯೋಜಕತ್ವದಲ್ಲಿ ದಯಾನಂದ ಜಿ ಕತ್ತಲ್ ಸಾರ್ ಬಳಗದವರಿಂದ ತುಳು ವಾಲ ಬಲಿಯೇಂದ್ರ ಎಂಬ ಪೌರಾಣಿಕ ತುಳು ಯಕ್ಷಗಾನ ತಾಳಮದ್ದಳೆ ನೆರವೇರಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಉದ್ಘಾಟಿಸಿದರು. ತುಳು ಸಂಸ್ಕೃತಿಯ ಅಳಿವು-ಉಳಿವಿನ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್ ನೀಡಿದರು. ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಜಯ ಶಂಕರ ಬಾಸ್ರಿತ್ತಾಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ ಕೃಷ್ಣ ಶಾಮ್ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button