ಬಂಟ್ವಾಳ ಎಸ್.ವಿ.ಎಸ್ ಪ್ರೌಢ ಶಾಲೆಯಲ್ಲಿ ಸ್ವಚ್ಚತಾ ಮಂಥನ ಕಾರ್ಯಕ್ರಮ….

ಬಂಟ್ವಾಳ :ರಾಮಕೃಷ್ಣ ಮಿಷನ್ ಮಂಗಳೂರು ಇದರ ಆಶ್ರಯದಲ್ಲಿ ನಡೆಯುತ್ತಿರುವ ಸ್ವಚ್ಚ ಭಾರತ ಆಂದೋಲನದ 5ನೇ ಹಂತದ ಸ್ವಚ್ಚತಾ ಮಂಥನ ಕಾರ್ಯಕ್ರಮವು ಬಂಟ್ವಾಳ ಎಸ್.ವಿ.ಎಸ್ ಪ್ರೌಢ ಶಾಲೆಯಲ್ಲಿ ಜರಗಿತು.
ಈ ಸಂದರ್ಭದಲ್ಲಿ ಸ್ವಚ್ಚತೆಗೊಂದು ಕೈಪಿಡಿ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್ ರವರು ಮಾತನಾಡಿ ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ಸಾಮುದಾಯಿಕವಾಗಿ ಸ್ವಚ್ಚತೆಯ ಕಾರ್ಯದಲ್ಲಿ ತೊಡಗಿಸಿಕೊಂಡರೆ ಸ್ಚಚ್ಚ ಭಾರತ ನಿರ್ಮಣವಾಗುತ್ತದೆ ಎಂದು ಮಾಹಿತಿ ನೀಡಿದರು.
ಮುಖ್ಯ ಶಿಕ್ಷಕಿ ನಂದಿನಿ ಬಾಯಿ ಸ್ವಾಗತಿಸಿ, ಸಂಯೋಜಕಿ ಉಷಾ ವಂದಿಸಿದರು. ನೂರು ವಿದ್ಯಾರ್ಥಿಗಳು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗಿಯಾದರು.

Related Articles

Leave a Reply

Your email address will not be published. Required fields are marked *

Back to top button