ಬೈಂದೂರು ಬ್ಲಾಕ್‌ ಕಾಂಗ್ರೆಸ್ – ಕಾರ್ಯಕರ್ತರ ಸಭೆ…

ಉಡುಪಿ: ಬೈಂದೂರು ಬ್ಲಾಕ್‌ ಕಾಂಗ್ರೆಸ್ ನ ಜಿಲ್ಲಾ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬರುವ ಕಿರಿಮಂಜೇಶ್ವರ, ಕೊಲ್ಲೂರು, ಶಿರೂರು ಗ್ರಾಮ ಪಂಚಾಯಿತಿ, ಬೈಂದೂರು ಪಟ್ಟಣ ಪಂಚಾಯತ್ ಮಟ್ಟದಲ್ಲಿ ಪಕ್ಷದಲ್ಲಿ ಸ್ಪರ್ಧಿಸಿದ್ದ ಪ್ರತಿನಿಧಿಗಳು , ಪಕ್ಷದ ಮುಖ್ಯ ಕಾರ್ಯಕರ್ತರು , ನಾಯಕರುಗಳ ಸಭೆ ಮೇ. 17 ರಂದು ನಡೆಯಿತು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭಾಗವಹಿಸಿ ಕಾರ್ಯಕರ್ತರ ಅಭಿಪ್ರಾಯ- ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರದ ಭರವಸೆ ನೀಡಿದರು.ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿಲಾಯಿತು
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು , ಮಾಜಿ ಶಾಸಕರಾದ ಗೋಪಾಲ ಪೂಜಾರಿ , ಪ್ರಸನ್ನ ಬೈಂದೂರು, ಬೈಂದೂರು ಬ್ಲಾಕ್‌ ಕಾಂಗ್ರೆಸಿನ ಅಧ್ಯಕ್ಷರಾದ ಎಸ್. ಮದನ್  ಸಭೆಯಲ್ಲಿ ಉಪಸ್ಥಿತರಿದ್ದರು.

 

Sponsors

Related Articles

Back to top button