ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಭಜನಾ ಮಂದಿರ ಕಾರಾಜೆ- ಧರ್ಮಸಭೆ…
![whatsapp image 2023 01 02 at 9.48.48 am](wp-content/uploads/2023/01/whatsapp-image-2023-01-02-at-9.48.48-am-780x470.jpeg)
ಬಂಟ್ವಾಳ: ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಭಜನಾ ಮಂದಿರ ಕಾರಾಜೆ ಸಜೀಪ ಮೂಡ ನವೀಕರಣ ಪುನ ಪ್ರತಿಷ್ಠೆ ಹನುಮಾನ್ ಗಾಯತ್ರಿ ಯಾಗ ನಿಮಿತ್ತ ಜರಗಿದ ಧರ್ಮಸಭೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳ್ಳಿಪಾಡಿಗುತ್ತು ಅಧ್ಯಕ್ಷತೆಯಲ್ಲಿ ಜರಗಿತು.
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ರಾಷ್ಟ್ರ ಸೇವಿಕ ರಾಷ್ಟ್ರ ಕಾರ್ಯಕಾರಿಣಿ ಸಮಿತಿ ಸದಸ್ಯೆ ಶ್ರೀಮತಿ ಡಾ ಕಮಲ ಪ್ರಭಾಕರ್ ಭಟ್, ಉದ್ಯಮಿ ವಿವೇಕ್ ಶೆಟ್ಟಿನಗ್ರಿ ಗುತ್ತು, ಅನ್ನಪಾಡಿ ಬಾಲ ಗಣಪತಿ ದೇವಸ್ಥಾನದ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಖದೀಪ ಮೂಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್ ಶ್ರೀಕಾಂತ್ ಶೆಟ್ಟಿ, ಶಿವಾನಂದ ಐತಾಳ್, ಸಂಸ್ಥೆಯ ಅಧ್ಯಕ್ಷ ಪುರುಷೋತ್ತಮ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ವಿವಿಧ ಬಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಅನ್ನದಾನ, ಯಕ್ಷಗಾನ ನಾಟ್ಯ ವೈಭವ, ರಾಷ್ಟ್ರದೇವೋಭವ ಜಾಗೃತಿ ಕಾರ್ಯಕ್ರಮ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಹಿರಿಯರನ್ನು ಗೌರವಿಸಲಾಯಿತು. ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.