ರಂಗ ಮಂದಿರ ನಿರ್ಮಾಣ ಕಾರ್ಯಕ್ಕೆ ಚಾಲನೆ…

ಬಂಟ್ವಾಳ: ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ದಾನಿಗಳ ಸಹಕಾರದಿಂದ ನಿರ್ಮಿಸಲು ಉದ್ದೇಶಿಸಿರುವ ರಂಗ ಮಂದಿರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಸಜೀಪ ಮಾಗಣೆಯ ತಂತ್ರಿಗಳಾದ ಶ್ರೀ ಎಂ. ಸುಬ್ರಹ್ಮಣ್ಯ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ, ಎಸ್ ಡಿ ಎಂ ಸಿ ಸದಸ್ಯರಾದ ಸೀತರಾಮ ಅಗೊಳಿಬೆಟ್ಟು, ದಿನಕರ್, ರವಿ ಪಂಬದ, ನಳಿನಿ, ವಿಶ್ವನಾಥ ಕೊಟ್ಟಾರಿ ಉಪಪ್ರಾಂಶುಪಾಲರಾದ ಜಯಲಕ್ಷ್ಮಿ ಪಿ.ಎನ್, ಸಹ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳಾದ ರವೀಣ ಬಂಗೇರ, ಶಿವರಾಮ ಮರ್ತಾಜೆ, ಪ್ರತಿಭಾ ಉಪಸ್ಥಿತರಿದ್ದು ಶುಭ ಕೋರಿದರು.

Related Articles

Back to top button