ಚುನಾವಣೆ ಸಮೀಪಿಸುವಾಗ ಮೋದಿ, ಅಮಿತ್ ಶಾ ಅವರಿಗೆ ರಾಜ್ಯದ ಮೇಲೆ ಪ್ರೀತಿ -ಕೆಪಿಸಿಸಿ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಅಪಹಾಸ್ಯ…

ಸುಳ್ಯ :ರಾಜ್ಯದ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸದ ಕೇಂದ್ರ ಸರಕಾರ ಚುನಾವಣೆ ದೃಷ್ಟಿಯಿಂದ ಪ್ರಧಾನಿ ಹಾಗೂ ಗೃಹ ಸಚಿವರು ರಾಜ್ಯಕ್ಕೆ ಆಗಾಗ ಬಂದು ಸರಕಾರದ ಖಜಾನೆ ಖಾಲಿಮಾಡುತ್ತಿದ್ದಾರೆ. ಹೀಗೆ ಮಾಡುವ ಬದಲು ಕೇಂದ್ರ ಸರ್ಕಾರ ಚುನಾವಣೆ ಮುಗಿಯುವವರೆಗೆ ಪ್ರಧಾನ ಮಂತ್ರಿಯವರ ಕಚೇರಿ ಹಾಗು ಮನೆಯನ್ನು ಬೆಂಗಳೂರಿಗೆ, ಗೃಹ ಸಚಿವರ ಮನೆ ಮತ್ತು ಕಚೇರಿಯನ್ನು ಹುಬ್ಬಳ್ಳಿ- ಧಾರವಾಡಕ್ಕೆ ಮತ್ತು ಕೇಂದ್ರದ ಇತರ ಸಚಿವರ ಮನೆಯನ್ನು ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಿಗೆ, ಆದಾಯ ತೆರಿಗೆ ಮತ್ತು ಇಡಿ ಕಚೇರಿಯನ್ನು ಕಾಂಗ್ರೆಸ್ ಪಕ್ಷದ ನಾಯಕರ ಮನೆಯ ಸಮೀಪ ಸ್ಥಾಪಿಸುವಂತೆ ಕೆಪಿಸಿಸಿ ವಕ್ತಾರರಾದ ಟಿ ಎಂ ಶಾಹಿದ್ ತೆಕ್ಕಿಲ್ ಕೇಂದ್ರ ಹಾಗು ರಾಜ್ಯ ಸರಕಾರವನ್ನು ಅಪಹಾಸ್ಯ ಮಾಡಿದ್ದಾರೆ.

Related Articles

Back to top button