ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ತಾಂತ್ರಿಕ ತರಬೇತಿ ಕಾರ್ಯಾಗಾರ…

ಮೂಡುಬಿದ್ರೆ : ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ವತಿಯಿಂದ ಒಂದು ದಿನದ ತಾಂತ್ರಿಕ ತರಬೇತಿ ಕಾರ್ಯಾಗಾರ ಜ.7 ರಂದು ನಡೆಯಿತು.
ಪೈತಾನ್ ಇಂಪ್ಲಿಮೆಂಟೇಷನ್ ಇನ್ ಎಂಬೆಡೆಡ್ ಸಿಸ್ಟಮ್ಸ್ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಮಂಗಳೂರಿನ ಕಾಕುಂಜೆ ಸಾಫ್ಟ್ ವೇರ್ ಪ್ರೈವೇಟ್ ಲಿಮಿಟೆಡ್ ನ ಮ್ಯಾನೇಜಿಂಗ್ ಡೈರೆಕ್ಟರ್ ಗೋಪಾಲ ಕೃಷ್ಣ ಭಟ್ ಮತ್ತು ದಿಲೀಪ್ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ತರಬೇತಿ ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಜಿ.ಡಿಸೋಜಾ ಅವರು ಕಾರ್ಯಾಗಾರಗಳ ಮಹತ್ವಗಳನ್ನು ತಿಳಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥ ಪ್ರೊ.ಗಂಗಾಧರ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ತರಬೇತಿ ಕಾರ್ಯಾಗಾರದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ವಿದ್ಯಾರ್ಥಿಗಳು, ಉಪನ್ಯಾಸಕರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button