ಬಿ ಕೆ ಹರಿಪ್ರಸಾದ್ -ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರ ಸೌಜನ್ಯದ ಭೇಟಿ…

ಬೆಳ್ತಂಗಡಿ: ಕರ್ನಾಟಕದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ ಕೆ ಹರಿಪ್ರಸಾದ್ ರವರು ಬೆಳ್ತಂಗಡಿ ಬಿಷಪ್ ಹೌಸ್ ನಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರನ್ನು ಸೌಜನ್ಯದ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್,ಕಾಂಗ್ರೆಸ್ ವಕ್ತಾರ ಹಾಗು ಕೆಪಿಸಿಸಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಟಿ ಎಂ ಶಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ರಂಜನ್ ಜಿ ಗೌಡ, ಧರಣೇದ್ರ ಕುಮಾರ್, ಶಾಹುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.

whatsapp image 2023 04 10 at 3.15.02 pm
Sponsors

Related Articles

Back to top button