ಎಂ ಸುಬ್ರಹ್ಮಣ್ಯ ಭಟ್ ಅವರಿಗೆ ಸನ್ಮಾನ…

ಬಂಟ್ವಾಳ: ಪ್ರಧಾನ ಮಂತ್ರಿ ನರೇಂದ್ರ ಮೋದಿ 9 ವರ್ಷ ಪ್ರಧಾನಿಯಾಗಿ ಪೂರೈಸಿದ ಹಾಗೂ ನಳಿನ್ ಕುಮಾರ್ ಕಟೀಲ್ ಸಂಸದರಾಗಿ 15 ವರ್ಷ ಸೇವೆ ಸಲ್ಲಿಸಿದ ನೆನಪಿಗಾಗಿ ಆ.13 ರಂದು ಬೊಳಿಯಾರ್ ಸಭಾಭವನದಲ್ಲಿ ಸಜೀಪ, ಮುಡಿಪು, ಕೂರ್ನಾಡು, ಪಜಿರು, ಕೋಣಾಜೆ ಪ್ರದೇಶಗಳಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳನ್ನು ಗೌರವಿಸಿದ ಸಂದರ್ಭದಲ್ಲಿ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಇವರನ್ನು ಬಿಜೆಪಿ ರಾಜ್ಯಾಧ್ಯಕ್ಷ, ಮಂಗಳೂರು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಸನ್ಮಾನ ಪತ್ರ ನೀಡಿ, ಸ್ಮರಣಿಕೆ ಹಾರ ಪಲ ಪುಷ್ಪ ನೀಡಿ ಸನ್ಮಾನಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕ್ರಮದ ಆಯೋಜಕರಾದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸಂತೋಷ್ ಕುಮಾರ್ ರೈ ಬೊಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.

whatsapp image 2023 08 13 at 7.39.19 pm (1)
Sponsors

Related Articles

Back to top button