ಶ್ರೀ ವಿಷ್ಣುಮೂರ್ತಿ ಭಜನಾ ಮಂದಿರ ಮಂಕುಡೆ ಕುಡ್ತಾಮುಗೇರು – ಸಹಾಯಧನ ಮಂಜೂರಾತಿ…

ಬಂಟ್ವಾಳ: ಬಂಟ್ವಾಳ ತಾಲೂಕು ಕೊಲ್ನಾಡು ಗ್ರಾಮದ ಶ್ರೀ ವಿಷ್ಣುಮೂರ್ತಿ ಭಜನಾ ಮಂದಿರ ಮಂಕುಡೆ ಕುಡ್ತಾಮುಗೇರು ಇದರ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ 2 ಲಕ್ಷ ಮೊತ್ತದ ಸಹಾಯಧನದ ಮಂಜೂರಾತಿ ಪತ್ರವನ್ನು ಭಜನಾ ಮಂಡಳಿಯ ಅಧ್ಯಕ್ಷರಿಗೆ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆ 2 ರ ನಿರ್ದೇಶಕರಾದ ಪ್ರವೀಣ್ ಕುಮಾರ್, ತಾಲೂಕು ಯೋಜನಾಧಿಕಾರಿಯಾಗಿ ಚೆನ್ನಪ್ಪ ಗೌಡ, ವಲಯದ ಮೇಲ್ವಿಚಾಕಿ ಮೋಹಿನಿ ಅವರ ಉಪಸ್ಥಿತಿಯಲ್ಲಿ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಮಂದಿರದ ಅಧ್ಯಕ್ಷರಾದ ಪದ್ಮನಾಭ ಸದಸ್ಯರಾದ ಸಂದೀಪ್, ಮನಿಶ್,ಹರೀಶ್ ಮತ್ತಿತರರು ಉಪಸ್ಥಿತರಿದ್ದರು.

Sponsors

Related Articles

Back to top button