ನ.2 – ಸುರತ್ಕಲ್ ಎನ್ಐಟಿಕೆ ಘಟಿಕೋತ್ಸವ……

ಮಂಗಳೂರು : ಸುರತ್ಕಲ್ ಎನ್‌ಐಟಿಕೆಯ(ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ) 17ನೇ ಘಟಿಕೋತ್ಸವ ನ.2ರಂದು ಕಾಲೇಜಿನ ನೂತನ ಕ್ರೀಡಾ ಸಂಕೀರ್ಣದಲ್ಲಿ ಜರಗಲಿದ್ದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಎನ್‌ಐಟಿಕೆ ನಿರ್ದೇಶಕ ಪ್ರೊ. ಕೆ.ಉಮಾಮಹೇಶ್ವರ ರಾವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
11 ಗಂಟೆಗೆ ಘಟಿಕೋತ್ಸವ ಕಾರ್ಯಕ್ರಮ ಆರಂಭಗೊಳ್ಳಲಿದೆ. ರಾಜ್ಯಪಾಲ ವಜುಬಾಯಿ ವಾಲಾ ಅವರು ಗೌರವ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಘಟಿಕೋತ್ಸವದಲ್ಲಿ ಬಿ.ಟೆಕ್, ಎಂ.ಟೆಕ್, ಎಂ.ಟೆಕ್(ರಿಸರ್ಚ್), ಎಂಸಿಎ, ಎಂಬಿಎ, ಎಂಎಸ್‌ಸಿ ಮತ್ತು 2018-19ನೇ ಸಾಲಿನಲ್ಲಿ ಪಿಎಚ್‌ಡಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಉಪನಿರ್ದೇಶಕ ಪ್ರೊ. ಅನಂತ ನಾರಾಯಣ ವಿ.ಎಸ್, ರಿಜಿಸ್ಟ್ರಾರ್ ಕೆ.ರವೀಂದ್ರನಾಥ್, ಸಂಚಾಲಕ ಪ್ರೊ. ಎ.ನಿತ್ಯಾನಂದ ಶೆಟ್ಟಿ, ಡಾ| ಅರುಣ್ ಎಂ.ಇಸ್ಲೂರ್ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button