ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮ…

ಪುತ್ತೂರು: ಬೆಂಕಿ ಇಲ್ಲದೆ ಬದುಕಿಲ್ಲ. ಆದರೆ ಬಳಕೆಯಲ್ಲಿ ವ್ಯತ್ಯಯ ಉಂಟಾದರೆ ಅದರಿಂದಾಗುವ ಅನಾಹುತ ಅಪಾರ ಎಂದು ಪುತ್ತೂರು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ರುಕ್ಮಯ ಗೌಡ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಲಾದ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹುಲ್ಲು ಕಟ್ಟಿಗೆಗಳಿಂದ, ಎಣ್ಣೆಯಿಂದ, ಅನಿಲದಿಂದ, ವಿದ್ಯುತ್ತಿನಿಂದ ಹಾಗೂ ಇನ್ನಿತರ ವಿಧಗಳಿಂದ ಬೆಂಕಿ ಸಂಭವಿಸಬಹುದು. ಎಲ್ಲಾ ಬಗೆಯ ಬೆಂಕಿ ಅನಾಹುತಗಳಿಗೆ ನೀರು ಹಾಯಿಸುವುದೇ ಪರಿಹಾರವಲ್ಲ ಬದಲಿಗೆ ವಿವಿಧ ರೀತಿಯ ನಿವಾರಕ ವಿಧಾನಗಳನ್ನು ಅನುಸರಿಸಬೇಕು. ಸಂದರ್ಭಕ್ಕೆ ತಕ್ಕಂತೆ ಅದರ ನಿವಾರಣೆಗೆ ನೀರು, ಫೋಮ್ ಮಿಶ್ರಿತ ನೀರು ಹಾಗೂ ಇನ್ನಿತರ ಅಗ್ನಿ ಶಾಮಕಗಳನ್ನು ಬಳಸಬೇಕು ಎಂದರು. ಕೆಲವೊಂದು ಬಾರಿ ಸಾಂಪ್ರದಾಯಿಕ ವಿಧಾನಗಳೂ ಕೂಡ ಬಳಕೆಗೆ ಬರುತ್ತವೆ ಎಂದರು. ಅಗ್ನಿ ಆಕಸ್ಮಿಕಗಳು ಸಂಭವಿಸಿದಾಗ ಧೃತಿಗೆಡತೆ ನಿವಾರಣೆಗೆ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದರು.
ವಿವಿಧ ಅಗ್ನಿಶಾಮಕ ವಿಧಾನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಟ್ಟರು. ವಿದ್ಯಾರ್ಥಿಗಳೂ ಕೂಡಾ ಇದರ ವಿಧಾನಗಳನ್ನು ತಾವೇ ಮಾಡುವುದರ ಮೂಲಕ ಕಲಿತುಕೊಂಡರು.
ಪುತ್ತೂರು ಅಗ್ನಿಶಾಮಕ ಠಾಣಾಧಿಕಾರಿ ರುಕ್ಮಯ ಗೌಡ ಅವರ ನೇತೃತ್ವದಲ್ಲಿ ಅಗ್ನಿ ಶಾಮಕ ಸಿಬ್ಬಂದಿಗಳಾದ ಕುಶಾಲಪ್ಪ, ಪಾಂಡುರಂಗ, ಮೌನೇಶ್, ವಿನೋದ್ ಹಾಗೂ ಚಾಲಕ ಕಿರಣ್ ಕುಮಾರ್ ಪ್ರಾತ್ಯಕ್ಷಿಕೆಗಳನ್ನು ನಡೆಸಿಕೊಟ್ಟರು.
ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ.ಭಟ್.ಟಿ.ಎಸ್ ಸ್ಮರಣಿಕೆ ನೀಡಿ ಗೌರವಿಸಿದರು. ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಕಾರ್ಯಕ್ರಮ ಸಂಯೋಜಕ ಡಾ.ರೋಬಿನ್ ಶಿಂಧೆ, ವಿಬಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡರು. ಪ್ರೊ.ಮಾನಸ.ಪಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

fire & safety (2)

fire & safety (3)

fire & safety (4)

Sponsors

Related Articles

Back to top button