ಕರ್ನಾಟಕ ಅಲ್ಪಸಂಖ್ಯಾತ ಆಯೋಗದ ನೂತನ ಅಧ್ಯಕ್ಷ ನಿಸಾರ್ ಅಹ್ಮದ್ ಅವರಿಗೆ ಸುಳ್ಯದ ಕಾಂಗ್ರೆಸ್ ನಾಯಕರಿಂದ ಅಭಿನಂದನೆ…

ಬೆಂಗಳೂರು: ಕರ್ನಾಟಕ ಸರಕಾರದಿಂದ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿ ಇತ್ತೀಚೆಗೆ ನೇಮಕಗೊಂಡು ಅಧಿಕಾರ ಸ್ವೀಕರಿಸಿದ ನಿವೃತ್ತ ಐ. ಪಿ. ಎಸ್ ಅಧಿಕಾರಿ ನಿಸಾರ್ ಅಹ್ಮದ್ ರವರನ್ನು ಬೆಂಗಳೂರಿನ ಕೆಎಂಡಿಸಿ ಭವನ ದಲ್ಲಿ ಭೇಟಿಯಾದ ಸುಳ್ಯದ ಪ್ರಮುಖ ನಾಯಕರು ನಿಸಾರ್ ಅಹ್ಮದ್ ರವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿಸಾರ್ ಅಹ್ಮದ್ ರವರು ದ. ಕ. ಜಿಲ್ಲೆಗೆ ಶೀಘ್ರದಲ್ಲೇ ಭೇಟಿ ನೀಡುವುದಾಗಿ ಹೇಳಿದರು
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್, ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಅರೆಭಾಷೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು , ಸುಳ್ಯ ನಗರ ಪಂಚಾಯತ್ ಸದಸ್ಯರುಗಳಾದ ಶರೀಫ್ ಕಂಠಿ, ಸಿದ್ದೀಕ್ ಕೋಕ್ಕೊ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button