ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಐಇಇಇ ದಿನಾಚರಣೆ…

ನೂತನ ತಂತ್ರಜ್ಞಾನಗಳನ್ನು ಕಲಿಯುವುದರಿಂದ ಆತ್ಮವಿಶ್ವಾಸ ವೃದ್ದಿ- ರವಿಕೃಷ್ಣ.ಡಿ.ಕಲ್ಲಾಜೆ...

ಪುತ್ತೂರು: ಐಇಇಇ ಸಂಸ್ಥೆಯು ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದು, ಪದವಿಪೂರ್ವ, ಪದವಿ ಮತ್ತು ಮುಂದುವರಿದ ವೃತ್ತಿಪರ ಶಿಕ್ಷಣಕ್ಕಾಗಿ ಪೂರಕ ಸಂಪನ್ಮೂಲಗಳನ್ನು ಒದಗಿಸುತ್ತದೆ. ಇದು ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳನ್ನು ಒದಗಿಸುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು.
ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಐಇಇಇ ವಿದ್ಯಾರ್ಥಿ ವಿಭಾಗ, ಐಇಇಇ ಮಂಗಳೂರು ಉಪ ವಿಭಾಗ ಹಾಗೂ ವುಮನ್ ಇನ್ ಇಂಜಿನಿಯರಿಂಗ್ ಇದರ ಸಂಯುಕ್ತ ಆಶ್ರಯದಲ್ಲಿ ಅ.7 ರಂದು ನಡೆದ ಐಇಇಇ ದಿನಾಚರಣೆಯ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಐಇಇಇ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನೂತನ ತಂತ್ರಜ್ಞಾನಗಳನ್ನು ಕಲಿಯುವುದರ ಜತೆಯಲ್ಲಿ ಆತ್ಮವಿಶ್ವಾಸವನ್ನು ವೃದ್ದಿಸಿಕೊಳ್ಳುವುದಕ್ಕೆ ಅನುಕೂಲವಾಗುತ್ತದೆ ಎಂದೂ ಅವರು ಹೇಳಿದರು.
ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ಐಇಇಇ ತನ್ನ ಕಲಿಕಾ ಜಾಲದ ಮೂಲಕ ಸಂಶೋಧನಾ ನಿರತರಿಗೆ, ಇಂಜಿನಿಯರಿಂಗ್ ಪ್ರಾಧ್ಯಾಪಕರಿಗೆ ಮತ್ತು ವಿದ್ಯಾರ್ಥಿಗಳಿಗೆ ನಿರಂತರ ವೃತ್ತಿಪರ ಶಿಕ್ಷಣವನ್ನು ನೀಡುತ್ತದೆ. ಇದರ ಚಟುವಟಿಕೆಗಳು ಕಾಲೇಜಿನಲ್ಲಿ ವರ್ಷಪೂರ್ತಿ ನಡೆಯುತ್ತಿದ್ದು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.
ಐಇಇಇ ದಿನಾಚರಣೆಯ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾಲೇಜು ಆಡಳಿತ ಮಂಡಳಿಯು ಕೊಡಮಾಡುವ ಉತ್ತಮ ಐಇಇಇ ಸ್ವಯಂಸೇವಕ ಪ್ರಶಸ್ತಿಯನ್ನು ಚಂದ್ರಪ್ರಕಾಶ್ ಶಂಕರ್ ನಾಯಕ್ ಹಾಗೂ ಅನುಶ್ರೀ ಅವರಿಗೆ ನೀಡಿ ಗೌರವಿಸಲಾಯಿತು.
ಕಾಲೇಜಿನ ಐಇಇಇ ವಿಭಾಗದ ಸಂಚಾಲಕಿ ಡಾ.ಜೀವಿತಾ.ಬಿ.ಕೆ ವರದಿಯನ್ನು ಮಂಡಿಸಿದರು, ಐಇಇಇ ವಿದ್ಯಾರ್ಥಿ ವಿಭಾಗದ ಮುಖ್ಯಸ್ಥ ಜೀವಿತ್ ಪ್ರಸ್ತಾವನೆಗೈದರು. ಸಾತ್ವಿಕ್ ಅಜೇರು ಮತ್ತು ಅಕ್ಷಯ.ಪಿ.ಎಸ್ ಪ್ರಾರ್ಥಿಸಿದರು. ವುಮನ್ ಇನ್ ಇಂಜಿನಿಯರಿಂಗ್‍ನ ಮುಖ್ಯಸ್ಥೆ ಅಶ್ವಿಜಾ ಸ್ವಾಗತಿಸಿ, ಐಇಇಇ ಸಿಬ್ಬಂದಿ ಸಲಹೆಗಾರ್ತಿ ಪ್ರೊ.ರಜನಿ ರೈ ವಂದಿಸಿದರು. ನಿತ್ಯ ಕಾರ್ಯಕ್ರಮ ನಿರ್ವಹಿಸಿದರು.

ieee day

ieee day1

Sponsors

Related Articles

Back to top button