ಸಂಕೇಶ್ ಇಬ್ರಾಹಿಂ ಹಾಜಿಯವರು ಅನಾರೋಗ್ಯ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ…

ಸುಳ್ಯ: ಮಂಡೆಕೋಲು ಗ್ರಾಮದ ಉದ್ಯಮಿ ಪೇರಾಲು ಸಂಕೇಶ್ ಅಬ್ದುಲ್ ರಹಮಾನ್ ಅವರ ತಂದೆ ಹಿರಿಯ ಸಾಮಾಜಿಕ,ರಾಜಕೀಯ ಮುಖಂಡ, ಮಸೀದಿಯ ಮಾಜಿ ಅಧ್ಯಕ್ಷರಾದ ಸಂಕೇಶ್ ಇಬ್ರಾಹಿಂ ಹಾಜಿಯವರು ಅನಾರೋಗ್ಯದಿಂದ ಕೆ ವಿ ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಗುಂಡೂರಾವ್ ಅವರನ್ನು ಆಸ್ಪತ್ರೆಯಲ್ಲಿ ಅ. 11 ರಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಶೀಘ್ರ ಗುಣ ಮುಖರಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಎಂ ಎಲ್ ಸಿ, ಐವನ್ ಡಿ ಸೋಜಾ ಎಂ ಎಲ್ ಸಿ, ಮಾಜಿ ಸಚಿವ ರಮಾನಾಥ್ ರೈ, ಕೆಪಿಸಿಸಿ ಪ್ರಧಾನ ಕಾರ್ಯರ್ಶಿ ಟಿ ಎಂ ಶಾಹಿದ್ ತೆಕ್ಕಿಲ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್,ಡಾ. ರಘು, ನಗರ ಪಂಚಾಯತ್ ಸದಸ್ಯ ಸಿದ್ದಿಕ್ ಕೊಕೊ ಸಚಿವರ ಜೊತೆಗಿದ್ದರು.
ಈ ಸಂದರ್ಭದಲ್ಲಿ ಎ ಓ ಎಲ್ ಇ ಅಧ್ಯಕ್ಷರಾದ ಡಾಕ್ಟರ್ ಕೆ.ವಿ ಚಿದಾನಂದ, ಎ ಓ ಎಲ್ ಇ ಪ್ರಧಾನ ಕಾರ್ಯದರ್ಶಿ ಕೆ ಸಿ ಅಕ್ಷಯ್ ಮೊದಲಾದವರು ಉಪಸ್ಥಿತರಿದ್ದರು.

whatsapp image 2024 10 11 at 5.17.40 pm (1)

Sponsors

Related Articles

Back to top button