ಶಿವು ಮಾದಪ್ಪ ನಿಧನ- ಟಿ ಎಂ ಶಾಹಿದ್ ತೆಕ್ಕಿಲ್ ಸಂತಾಪ…

ಸುಳ್ಯ: ಮಡಿಕೇರಿ,ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ ಜನನುರಾಗಿಯಾಗಿದ್ದ ಕುಟ್ಟ ಗ್ರಾಮದ ಶಿವುಮಾದಪ್ಪ ಅವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿದ್ದ ಸಂದರ್ಭದಲ್ಲಿ ಹಲವು ಬಾರಿ ಅವರ ಮನೆಗೆ ಭೇಟಿ ನೀಡಿ ಪಕ್ಷ ಸಂಘಟನೆ ಬಗ್ಗೆ, ಅವರ ಸಲಹೆ ಸೂಚನೆ ಬಗ್ಗೆ ಚರ್ಚಿಸಿದ್ದೆ. ಅವರ ನಿಧನ ಕೊಡಗು ಜಿಲ್ಲೆಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ. ಶಿವಮಾದಪ್ಪ ಅವರ ನಿಧನದಿಂದ ಅವರ ಕುಟುಂಬಕ್ಕೆ, ಹಿತೈಷಿಗಳಿಗೆ, ಅಭಿಮಾನಿಗಳಿಗೆ ಆಗಿರುವ ದುಃಖವನ್ನು ಸಹಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಸಂತಾಪ ಸೂಚಕದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಪ್ರಾರ್ಥಿಸಿದ್ದಾರೆ.