ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇವಾಲಯದ ಜೀರ್ಣೋದ್ಧಾರಕ್ಕೆ ಸಹಾಯಧನ ವಿತರಣೆ…

ಬಂಟ್ವಾಳ: ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪ್ಪಾಡಿ ಸಜೀಪಮೂಡ ಇದರ ಜೀವನಾಧಾರ ಕಾರ್ಯಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಕ್ಷೇತ್ರದ ವತಿಯಿಂದ ರೂ. 5 ಲಕ್ಷ ಮಂಜೂರು ಮಾಡಿದ್ದು, ಡಿಡಿಯನ್ನು ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ದೇವಾಲಯದ ಪದಾಧಿಕಾರಿಗಳಿಗೆ ಇಂದು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಯಶವಂತ ದೇರಾಜೆ, ಸಜಿಪ ಮಾಗಣೆ ತಂತ್ರಿ ಎಂ. ಸುಬ್ರಮಣ್ಯ ಭಟ್, ಕೆ. ಸದಾನಂದ ಶೆಟ್ಟಿ, ರಮೇಶ್ , ಲಿಂಗಪ್ಪ ದೋಟ, ಸುರೇಶ್ ಬಂಗೇರ, ಸಜೀಪಾಪಡು ಗ್ರಾಮ ಪಂಚಾಯತ್ ಅಧ್ಯಕ್ಷ ವಿಠಲ, ದೇವದಾಸ್, ಒಕ್ಕೂಟ ಅಧ್ಯಕ್ಷ ಚಂದ್ರಹಾಸ, ತಾಲೂಕು ಯೋಜನಾಧಿಕಾರಿ ಜಯಾನಂದ, ಉಗ್ಗಪ್ಪ ಮೂಲ್ಯ, ಹರೀಶ,ಬಾಲಕೃಷ್ಣ, ಕುಶೇಶ, ಸೇವಾ ಪ್ರತಿನಿಧಿ ಬಬಿತಾ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button