ಸೂಡ ಅಧ್ಯಕ್ಷ ಕೆ. ಎಂ ಮುಸ್ತಫ ರವರಿಂದ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಯೋಜನಾ ಇಲಾಖೆ ಸ್ಟೇಟ್ ಕಮಿಷನರ್ ಭೇಟಿ…

ಸುಳ್ಯ: ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಐಎಎಸ್ ಅಧಿಕಾರಿ ದೀಪಾ ಚೋಳನ್ ಮತ್ತು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಆಯುಕ್ತರಾದ ಐಎಎಸ್ ಅಧಿಕಾರಿ ಶ್ರೀ ವೆಂಕಟಾಚಲಪತಿ ಯವರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ ಇತ್ತೀಚೆಗೆ ಹೊಸದಾಗಿ ರಚನೆಗೊಂಡ ಸುಳ್ಯ ನಗರ ಯೋಜನಾ ಪ್ರಾದಿಕಾರಕ್ಕೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಚರ್ಚಿಸಿ, ಮನವಿ ಸಲ್ಲಿಸಿದರು.