ದ. ಕ ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟ ರಚನೆ…

ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ಸಂಚಾಲಕರಾಗಿ ಆಯ್ಕೆ...

ಮಂಗಳೂರು:ದ. ಕ. ಮತ್ತು ಉಡುಪಿ ಜಿಲ್ಲೆಗಳ 2 ನಗರಾಭಿವೃದ್ಧಿ 6 ಸ್ಥಳೀಯ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರುಗಳು ಮತ್ತು ಸದಸ್ಯರುಗಳ ಸಭೆಯನ್ನು ಮಂಗಳೂರು ಡಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ಸದ್ರಿ ಸಭೆಯಲ್ಲಿ ನಗರ ಮತ್ತು ಗ್ರಾಮಾoತರ ಪ್ರದೇಶ ಗಳಲ್ಲಿ 9/11,ಕನ್ವರ್ಷನ್, ಕಟ್ಟಡ ಪರವಾನಿಗೆ, ಏಕ ನಿವೇಶನ ಅನುಮೋದನೆ, ವಿನ್ಯಾಸ ನಕ್ಷೆ, ಮಹಾಯೋಜನೆ, ಮೊದಲಾದ ಸೌಲಭ್ಯಗಳಲ್ಲಿ ಕಾನೂನಿನ ಸರಳೀಕರಣ, ವಿಶಿಷ್ಟ ಬೌಗೋಳಿಕ ಹಿನ್ನಲೆಯ ಕರಾವಳಿಗೆ ಪ್ರತ್ಯೇಕ ವಲಯ ನಿಯಮಾವಳಿ ರಚನೆ ಮೊದಲಾದ ಸಮಸ್ಯೆ ಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಲು ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟ ರಚಿಸಲಾಯಿತು.
ಒಕ್ಕೂಟದ ಅಧ್ಯಕ್ಷರಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಸಂಚಾಲಕರುಗಳಾಗಿ ಸುಳ್ಯ ಯೋಜನಾ ಪ್ರಾಧಿಕಾರ ( ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ್ ಹೇರೂರ್ ಆಯ್ಕೆಯಾದರು.
ಸಭೆಯಲ್ಲಿ ದ. ಕ. ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ನಗರಾಭಿವೃದ್ಧಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರುಗಳು ಭಾಗವಹಿಸಿದ್ದರು.

whatsapp image 2025 06 16 at 10.02.04 pm (1)

whatsapp image 2025 06 16 at 10.02.04 pm (2)

Sponsors

Related Articles

Back to top button