ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದ ಸಂಚಾಲಕ ಕೆ. ಎಂ. ಮುಸ್ತಫ ಸುಳ್ಯ ರವರನ್ನೊಳಗೊಂಡ ನಿಯೋಗದಿಂದ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಜಂಟಿ ನಿರ್ದೇಶಕರ ಭೇಟಿ…

ಮೈಸೂರು:ಕರಾವಳಿಗೆ ಪ್ರತ್ಯೇಕ ವಲಯ ನಿಯಮಾವಳಿ ಅನುಷ್ಟಾನ ಗೊಳಿಸಲು ಮನವಿ 9/11 ನಿಯಮಗಳ ಸರಳೀಕರಣ, ಕಟ್ ಕನ್ವರ್ಷನ್, ರಸ್ತೆ ಆಗಲೀಕರಣ ಮಾರ್ಜಿನ್ ಕಡಿತ ಗೊಳಿಸುವ ಇತ್ಯಾದಿ ಸಮಸ್ಯೆ ಗಳ ಬಗ್ಗೆ ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟ ನಿಯೋಗದ ವತಿಯಿಂದ ಮೈಸೂರಿಗೆ ತೆರಳಿ ಜಂಟಿ ನಿರ್ದೇಶಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ವಲಯ ನಿಯಮಾವಳಿ ರಚಿಸಲು ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜೆಡಿ ದ. ಕ. ಮತ್ತು ಉಡುಪಿ ಜಿಲ್ಲೆ ಗಳ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ನೇತೃತ್ವದ ನಿಯೋಗ ನಗರ ಮತ್ತು ಗ್ರಾಮಾoತರ ಯೋಜನೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ಡಾ. ಪಂಕಜ ಎಂ. ಎಸ್ ರವರನ್ನು ಭೇಟಿಯಾಗಿ ಸಮಸ್ಯೆಗಳ ಮತ್ತು ಬೇಡಿಕೆಯ ಮನವಿ ಸಲ್ಲಿಸಿ ವಿಸ್ತ್ರತ ವಾಗಿ ಚರ್ಚಿಸಲಾಯಿತು.
ಭಿನ್ನವಾದ ಬೌಗೋಳಿಕ ಹಿನ್ನಲೆ ಹೊಂದಿರುವ ದ. ಕ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಯನ್ನೊಳಗೊಂಡ ಕರಾವಳಿಗೆ ಪ್ರತ್ಯೇಕ ವಲಯ ನಿಯಮಾವಳಿ ರಚಿಸಬೇಕು. ಹಾಲಿ ಇರುವ ನಗರ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿ ಯಲ್ಲಿರುವ ವಲಯ ನಿಯಮಾವಳಿಗಳು ಕರಾವಳಿ ಪ್ರದೇಶ ದಲ್ಲಿ ಅನುಷ್ಠಾನಗೊಳಿಸುವುದು ಕಷ್ಟ ಸಾಧ್ಯವಾಗಿದೆ ಎಂದು ಮನವರಿಕೆ ಮಾಡಲಾಯಿತು.
ನಿಯೋಗದಲ್ಲಿ ಒಕ್ಕೂಟದ ಸಂಚಾಲಕರುಗಳಾದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ್ ಹೇರೂರ್, ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ, ಮೂಡಬಿದ್ರಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹರ್ಷ ವರ್ಧನ ಜೈನ್, ಕುಂದಾಪುರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ತಾ, ವಿವಿಧ ಪ್ರಾಧಿಕಾರದ ಸದಸ್ಯರುಗಳಾದ ಸತೀಶ್ ಭಂಡಾರಿ, ಶೇಖರ್ ಬೊಳ್ಳಿ ಇನ್ನಿತರರು ಮತ್ತು ಹಿರಿಯ ಉಪ ನಿರ್ದೇಶಕ ರಾದ ಹನುಮಂತ ರಾಯಪ್ಪ ಮೊದಲಾದವರು ಉಪಸ್ಥಿತರಿದ್ದರು.

whatsapp image 2025 06 23 at 7.42.37 pm (2)

Sponsors

Related Articles

Back to top button