ಅಬ್ದುಲ್ ರಹಿಮಾನ್ ಮೊಗರ್ಪಣೆ ಅವರಿಗೆ ಸನ್ಮಾನ…

ಮಂಗಳೂರು: ಸತತ 7 ವರ್ಷಗಳಿಂದ ಹಜ್ ಯಾತ್ರೆಗೆ ಹೋಗುವವರಿಗೆ ನಿಸ್ವಾರ್ಥ ಸೇವೆ ಮಾಡಿದ ಸುಳ್ಯ ಭಾಗದ ಹಜ್ ವಿರ್ವಹಣಾ ಸಮಿತಿ ಸದಸ್ಯ, ವಕ್ಫ್ ಬೋರ್ಡ್ ಉಪಾಧ್ಯಕ್ಷ, ಕರ್ನಾಟಕ ಮುಸ್ಲಿಂ ಜಮಾಅತ್ ಸದಸ್ಯ ಅಬ್ದುಲ್ ರಹಿಮಾನ್ ಮೊಗರ್ಪಣೆ ಅವರಿಗೆ ಮಂಗಳೂರು ಹಜ್ ನಿರ್ವಹಣಾ ಸಮಿತಿ ವತಿಯಿಂದ ಸನ್ಮಾನ ನಡೆಯಿತು.
ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಯೆನೆಪೋಯ ಅಬ್ದುಲ್ಲಾ ಕುಂಞ, SMR ಗ್ರೂಪಿನ ಮಾಲೀಕರಾದ ರಶೀದ್ ಹಾಜಿ, ಮುಸ್ಲಿಂ ಸೆಂಟ್ರಲ್ ಕಮಿಟಿ ಕಾರ್ಯದರ್ಶಿ ಪುತ್ತು ಬಾವ ಹಾಜಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.