ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು- ಅಂತಾರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2025 “…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ವಿದ್ಯಾರ್ಥಿ ವಿಭಾಗ, ಗ್ಲೋಬಲ್ ಡಿಗ್ರೀಸ್ ಮಣಿಪಾಲ್, ಇನ್ಸ್ಟಿಟ್ಯೂಶನ್ಸ್ ಇನ್ನೋವೇಶನ್ ಸೆಲ್ ಮತ್ತು ಕೆನರಾ ಬ್ಯಾಂಕ್ ಇದರ ಸಂಯುಕ್ತ ಆಶ್ರಯದಲ್ಲಿ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಎನ್ನುವ ಕುರಿತು 3 ನೇ ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2025 ಕಾರ್ಯಕ್ರಮವು ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ಆ.9 ರಂದು ನಡೆಯಿತು.
ಈ ಕಾರ್ಯಕ್ರಮವು ಜಗತ್ತಿನಾದ್ಯಂತದ ಖ್ಯಾತ ಶಿಕ್ಷಣ ತಜ್ಞರು, ಸಂಶೋಧಕರು, ವಿದ್ಯಾರ್ಥಿಗಳು ಮತ್ತು ಉದ್ಯಮ ಕ್ಷೇತ್ರದ ತಜ್ಞರನ್ನು ಒಟ್ಟು ಸೇರಿಸಿ ಜ್ಞಾನ ಹಂಚಿಕೆ ಮತ್ತು ಸಹಯೋಗದ ಹೊಸ ಅವಕಾಶಗಳನ್ನು ಸೃಷ್ಟಿಸಿತು. ಇಲ್ಲಿ 267 ಸಂಶೋಧನಾ ಪ್ರಬಂಧಗಳ ಪ್ರಸ್ತುತಿ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೆನರಾ ಬ್ಯಾಂಕಿನ ಪುತ್ತೂರು ಪ್ರಾದೇಶಿಕ ಕಛೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರಂಜನ್ ಕುಮಾರ್, ತಂತ್ರಜ್ಞಾನ ಮತ್ತು ನಿರ್ವಹಣೆ ಜಗತ್ತಿನ ಆರ್ಥಿಕತೆಯ ಆಧಾರ ಸ್ತಂಭಗಳಾಗಿವೆ. ಇದರ ಹೊಸತನದ ಕಲಿಕೆ ಮತ್ತು ಬಳಕೆಗೆ ಅಗತ್ಯವಾದ ತಿಳುವಳಿಕೆಯನ್ನು ನೀಡಲು ಇಂತಹ ಸಮ್ಮೇಳನಗಳು ಸಹಕಾರಿಯಾಗುತ್ತವೆ ಎಂದರು.
ಆನ್‍ಲೈನ್ ಮೂಲಕ ಜತೆಯಾದ ದಿ ಮೆನೇಜ್ಮೆಂಟ್ ಯುನಿವರ್ಸಿಟಿ ಆಫ್ ಆಫ್ರಿಕಾ, ಕೆನ್ಯಾ ಇದರ ಪ್ರಾಂಶುಪಾಲ ಡಾ.ನ್ಯಾಗಾ ಜಸ್ಟರ್ ಆರ್ಥಿಕ ಅಭಿವೃದ್ದಿಯನ್ನು ಹೆಚ್ಚಿಸಲು ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳ ಆವಶ್ಯಕತೆ ಇದೆ. ಈ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಗಮನವನ್ನು ಹರಿಸಬೇಕು ಎಂದರು.
ಗೌರವ ಅತಿಥಿಗಳಾಗಿ ಭಾಗವಹಿಸಿದ್ದ ಐಐಐಟಿ ಧಾರವಾಡ ಇದರ ಅಸೋಸಿಯೇಟ್ ಪ್ರೊಫೆಸರ್ ಹಾಗೂ ಡೀನ್ ಡಾ.ರಾಜೇಂದ್ರ ಹೆಗಡಿ ಮಾತನಾಡಿ ವಿದ್ಯಾರ್ಥಿಗಳು ಕಲಿತು ಹೊರಬಂದಾಗ ಆ ತಂತ್ರಜ್ಞಾನಗಳು ಬದಲಾಗಿರುತ್ತವೆ ಇದಕ್ಕಾಗಿ ಪೂರಕ ವಿಷಯಗಳ ಕಲಿಕೆ ಅಗತ್ಯವಾಗಿದೆ. ಇಂತಹ ಸಮ್ಮೇಳನಗಳು ಜ್ಞಾನ ಹಂಚಿಕೆಗೆ ಅವಕಾಶವನ್ನು ನೀಡುತ್ತವೆ ಎಂದರು.
ದಿ ಗ್ಲೋಬಲ್ ಡಿಗ್ರೀಸ್ ಮಣಿಪಾಲ್ ಇದರ ಶಾಖಾ ನಿರ್ದೇಶಕ ಶಿಜೋ ಮೋನ್ ಯೇಸುದಾಸ್ ಆನ್‍ಲೈನ್ ಮೂಲಕ ಪಾಲ್ಗೊಂಡು ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಜತೆಯಲ್ಲಿ ಅವರನ್ನು ಸಮಾಜದ ಜವಾಬ್ಧಾರಿಯುತ ನಾಗರಿಕನ್ನಾಗಿಸುವಲ್ಲಿ ಕಾಲೇಜು ಮುಂಚೂಣಿಯಲ್ಲಿದೆ. ವಿದ್ಯಾರ್ಥಿಗಳ ಹಿತಕ್ಕಾಗಿ ಇಂತಹ ಸಮ್ಮೇಳನಗಳು ನಿರಂತರವಾಗಿ ನಡೆಯುತ್ತಿವೆ ಎಂದು ಹೇಳಿದರು
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆನರಾ ಬ್ಯಾಂಕ್ ನೆಹರೂ ನಗರ ಶಾಖೆಯ ವ್ಯವಸ್ಥಾಪಕ ತೇಜ್ ಕುಮಾರ್ ಸಮಾರಂಭದಲ್ಲಿ ಭಾಗವಹಿಸಿದರು.
ಕಾರ್ಯಕ್ರಮ ಸಂಯೋಜಕ ಹಾಗೂ ಎಂಬಿಎ ವಿಭಾಗದ ನಿರ್ದೇಶಕ ಡಾ.ರಾಬಿನ್ ಮನೋಹರ್ ಶಿಂಧೆ ಪ್ರಸ್ತಾವನೆಗೈದರು. ಸಹ-ಸಂಯೋಜಕಿ ಹಾಗೂ ಎಂಸಿಎ ವಿಭಾಗದ ನಿರ್ದೇಶಕಿ ಡಾ.ಜ್ಯೋತಿಮಣಿ.ಕೆ ಸ್ವಾಗತಿಸಿ, ಪ್ರೊ.ರೇಶ್ಮಾ ಪೈ ವಂದಿಸಿದರು. ಪ್ರೊ.ನೀಮಾ ಕಾರ್ಯಕ್ರಮ ನಿರ್ವಹಿಸಿದರು.

drushti2

drusti4

Related Articles

Back to top button