ಗೇರು ಕೃಷಿ ಮಾಹಿತಿ ಹಾಗೂ 2000 ಗಿಡಗಳ ವಿತರಣೆ…

ಕೃಷಿ ಇಲಾಖೆ ಸುಳ್ಯ ವತಿಯಿಂದ ಮಣ್ಣಿನ ಪರೀಕ್ಷೆ ಮತ್ತು ಮಹತ್ವದ ಬಗ್ಗೆ ತರಬೇತಿ ಕಾರ್ಯಕ್ರಮ...

ಸುಳ್ಯ: ಸಂಪಾಜೆ ಗ್ರಾಮ ಪಂಚಾಯತ್, ಭಾ.ಕೃ.ಸಂ.ಪ ಗೇರು ಸಂಶೋದನಾ ನಿರ್ದೇಶನಾಲಯ ಪುತ್ತೂರು , ಕೃಷಿ ಇಲಾಖೆ ಸುಳ್ಯ , ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ(ನಿ.) ವಿಟ್ಲ, ಮಂಗಳೂರು, ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ ಸುಳ್ಯ, ಎನ್ ಆರ್ ಎಲ್ ಎಂ ಸುಳ್ಯ, ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.)ಸಂಪಾಜೆ ಜಂಟಿ ಆಶ್ರಯದಲ್ಲಿ ಮಣ್ಣು ಪರೀಕ್ಷೆ ತರಬೇತಿ ಹಾಗೂ ಗೇರು ಗಿಡಗಳ ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವು ಐಸಿಎಆರ್ ಗೀತೆ ಹಾಗೂ ರೈತ ಗೀತೆಯೊಂದಿಗೆ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ವಹಿಸಿ, ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಗುರುಪ್ರಸಾದ್ ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ಮತ್ತು ಮಣ್ಣಿನ ಪರೀಕ್ಷೆ ಹಾಗೂ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಡಾ.ಈರದಾಸಪ್ಪ ಇ ವಿಜ್ಞಾನಿ ತಳಿಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಭಾಗ ಇವರು ಸಾಂಕೇತಿಕವಾಗಿ ಸಭೆಯಲ್ಲಿ ಗಿಡ ವಿತರಿಸಿ ಗೇರು ತಳಿಗಳ ಬಗ್ಗೆ ಬಗ್ಗೆ ಮಾಹಿತಿ ನೀಡಿದರು. ಡಾ. ಭಾಗ್ಯ ವಿಜ್ಞಾನಿ ತೋಟಗಾರಿಕಾ ವಿಭಾಗ ಗೇರು ನಾಟಿ ವಿಧಾನ ಮತ್ತು ನಾಟಿಯ ನಂತರದ ಆರೈಕೆ ಬಗ್ಗೆ ಮಾಹಿತಿ ನೀಡಿದರು. ಡಾ.ಅಶ್ವತಿ ಚಂದ್ರಕುಮಾರ್ ವಿಜ್ಞಾನಿ ಕೃಷಿ ವಿಸ್ತರಣಾ ವಿಭಾಗ ಆರ್ ಕೆ ವಿ ವೈ ಯೋಜನೆಯ ಬಗ್ಗೆ ಮಾಹಿತಿ ಮತ್ತು ಮುಂದಿನ ದಿನಗಳಲ್ಲಿ ಗಿಡಗಳ ಬೆಳವಣಿಗೆ, ಇಳುವರಿಯ ಬಗ್ಗೆ ಫಲಾನುಭವಿಗಳು ಪ್ರತಿಕ್ರಿಯೆ ನೀಡಬೇಕು ಎಂದು ತಿಳಿಸಿದರು. ಗೇರಿನ ಮೌಲ್ಯವರ್ಧನೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ ಹನೀಫ್, ಸಂಪಾಜೆ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಜಿ ಕೆ ಹಮೀದ್ ಗೂನಡ್ಕ, ನಿವೃತ್ತ ಸೈನಿಕರು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ ಪಿ ಜಗದೀಶ್, ಕೃಷಿ ಇಲಾಖೆಯ ಸಿಬ್ಬಂದಿ ನಂದಿತ ಬಿಟಿಎಂ, ಅಶ್ವಿನಿ ಪುತ್ತೂರು, ಸತೀಶ್ ಪುತ್ತೂರು, NRLM ಸಂಜೀವಿನಿ ಕೃಷಿ ಜೀವನೋಪಾಯ ವಲಯ ಮೇಲ್ವಿಚಾರಕರು ಹೃತಿಕ್, ಜಾಲ್ಸೂರು ಗ್ರಾಮದ ಕೃಷಿಸಖಿ ವಿಜಯ, ಪಶುಸಖಿ ರಶ್ಮಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಜಗದೀಶ್ ರೈ, ಸುಂದರಿ, ಅನುಪಮ, ರಜನಿ ಶರತ್, ವಿಮಲಾ ಪ್ರಸಾದ್, ಲಿಸ್ಡಿ ಮೊನಾಲಿಸಾ ಸೊಸೈಟಿ ಉಪಾಧ್ಯಕ್ಷರಾದ ಯಮುನಾ ಬಿ. ಎಸ್, ಸೊಸೈಟಿ ನಿರ್ದೇಶಕರಾದ ಗಣಪತಿ ಭಟ್, ಶಂಕರ ಪ್ರಸಾದ್ ರೈ, ಕೃಷಿಸಖಿ ಮೋಹಿನಿ ವಿಶ್ವನಾಥ್ (ನಿಶಾ), ಸಂಜೀವಿನಿ ಒಕ್ಕೂಟದ ಕಾಂತಿ ಬಿ.ಎಸ್, ಯಶೋಧ, ಸೌಮ್ಯ, ಲಲನ, ಗೇರು ಗಿಡಗಳ ಫಲಾನುಭವಿಗಳು ಹಾಗೂ ಗ್ರಾಮದ ಕೃಷಿಕರು ಉಪಸ್ಥಿತರಿದ್ದರು.
ಸಹಾಯಕ ಕೃಷಿ ನಿರ್ದೇಶಕರಾದ ಗುರುಪ್ರಸಾದ್ ಸ್ವಾಗತಿಸಿದರು, ಕೃಷಿಸಖಿ ಮೋಹಿನಿ ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿ, ಎಂಬಿಕೆ ಕಾಂತಿ ಬಿ ಎಸ್ ವಂದಿಸಿದರು. ಮಧ್ಯಾಹ್ನ ಊಟದ ಬಳಿಕ ಗೇರು ಗಿಡಗಳಿಗೆ ಅರ್ಜಿ ಸಲ್ಲಿಸಿರುವ ಕೃಷಿಕರಿಗೆ ಗೇರು ಸಂಶೋಧನಾ ನಿರ್ದೇಶನಾಲಯದ ವತಿಯಿಂದ 2000 ಗಿಡಗಳನ್ನು ಉಚಿತವಾಗಿ ವಿತರಿಸಲಾಯಿತು.

whatsapp image 2025 09 25 at 6.52.27 pm

whatsapp image 2025 09 25 at 6.52.34 pm

whatsapp image 2025 09 25 at 6.52.30 pm

Related Articles

Back to top button